ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ತಾಲೂಕಿನ ಸಾಮೂಹಿಕ ವಿವಾಹ ಆಯೋಜಕರಿಗೆ, ಪೂಜಾರಿಗಳಿಗೆ, ಕಲ್ಯಾಣ ಮಂಟಪದ ವ್ಯವಸ್ಥಾಪಕರು, ಧಾರ್ಮಿಕ ಮುಖಂಡರು, ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಒಂದು ದಿನದ ಅರಿವು ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಾಲ್ಯ ವಿವಾಹ ತಡೆಗಟ್ಟಲು ಇಲಾಖೆಯ ಜೊತೆ ನಾವೆಲ್ಲರೂ ಕೈ ಜೋಡಿಸುವ ಮೂಲಕ ಜಿಲ್ಲೆಯ ಗೌರವ ಉಳಿಸುವ, ದೇಶದ ಕಾನೂನಿಗೆ ಗೌರವ ನೀಡುವ ಎಂದು ಅವರು ಹೇಳಿದರು.
ವೇದಿಕೆಯ ಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕ ಕುಮಾರ್ , ಸಂಪನ್ಮೂಲ ವ್ಯಕ್ತಿಗಳಾದ ಆಶಾ ಮಣಿ ರೈ, ಉಮೇಶ್ ನಿರ್ಮಲ್ ಉಪಸ್ಥಿತರಿದ್ದರು. ವಿಟ್ಲ ಸಿ.ಡಿ.ಪಿ.ಒ. ಸುಧಾಜೋಶಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಂಟ್ವಾಳ ಸಿ.ಡಿ.ಪಿ.ಒ.ಇಲಾಖೆ ಯ ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿದರು.
ಹಿರಿಯ ಮೇಲ್ವಿಚಾರಕಿ ಭಾರತಿ ಕಾರ್ಯ ಕ್ರಮ ನಿರೂಪಿಸಿದರು.