ಬಂಟ್ವಾಳ: ಕುರ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದ ವ್ಯಾಪ್ತಿಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ನೀಡುವ ಬೃಹತ್ ವಿಕಲಚೇತನರ ಆರೋಗ್ಯ ಶಿಬಿರ ವು ಜನವರಿ ತಿಂಗಳಿನ 16ರಂದು ಬಾಳೆಪುಣಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆಯಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಇಂದು ಮಂಚಿಯಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯರು, ಕಾರ್ಯಕ್ರಮದ ರೂವಾರಿಗಳಾದ ಮಮತಾ ಡಿ.ಎಸ್.ಗಟ್ಟಿ ಪೂರಕ ಮಾಹಿತಿಗಳನ್ನು ನೀಡಿದರು. ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮೊಹಮ್ಮದ್ ಹಾಗು ತಾಲೂಕು ವೈದ್ಯಾಧಿಕಾರಿಗಳಾದ ಡಾ.ದೀಪಾ ಪ್ರಭು ಸಹಕಾರದ ಮಾತುಗಳನ್ನಾಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಮ್ ಜಿ.ಎಂ, ಡಾ.ಸುರೇಖಾ ಶೆಟ್ಟಿ, ಡಾ.ರೋಹಿಣಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಪಾಲ್ಗೊಂಡಿದ್ದರು.