Thursday, April 11, 2024

‘ಮಾನವ ಜೀವನದ ಮೌಲ್ಯವನ್ನು ಗುರುತಿಸಿ’: ಡಾ.ಅನೂಪ್ ಪೂಜಾರಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಪಡೆದ ಈ ತರಬೇತಿಯು ನಿಮ್ಮಲ್ಲಿರುವ ಮಾನವೀಯ ಮೌಲ್ಯವನ್ನು ಹೆಚ್ಚಿಸಿದೆ, ಅದನ್ನು ಗುರುತಿಸಿಕೊಳ್ಳಿ ಮತ್ತು ಉಳಿಸಿಕೊಳ್ಳಿ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಅನೂಪ್ ಪೂಜಾರಿ ಐಎಎಸ್ (ನಿವೃತ) ಯವರು ಅಭಿಪ್ರಾಯ ಪಟ್ಟರು. ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಭಿರಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಂಪ್ಯೂಟರ್ ಹಾರ್ಡವೇರ್ ತರಬೇತಿ ಕಾರ್ಯಕ್ರಮದ ಪ್ರಮಾಣ ಪತ್ರವನ್ನು ವಿತರಿಸಿದರು. ಚೆನ್ನೈನ ಮದ್ರಾಸ್ ಇನಿಸ್ಟಿಟ್ಯೂಟ್ ಆಫ್ ಡೆವಲೆಪ್‌ಮೆಂಟ್ ಸ್ಟಡೀಸ್ ಇದರ ನಿರ್ದೇಶಕರಾದ ಡಾ. ಶಶಂಕ್ ಭಿಡೆ ಯವರು ಮತ್ತು ಜಿಲ್ಲಾ ಕೌಶಲ್ಯಭಿವೃದ್ಧಿ ಕಛೇರಿ ಅಧಿಕಾರಿ ಶ್ರೀ ತಾರನಾಥ್, ರುಡ್‌ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್ ರವರು ಉಪಸ್ಥಿತರಿದ್ದರು. ನಿರ್ದೇಶಕರಾದ ಶ್ರೀ ವಿನಯ್ ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...