ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ನ ವತಿಯಿಂದ ಜನವರಿ ೧೩ರಂದು ಒಡ್ಡೂರು ಫಾರ್ಮ್ಗೆ ಭೇಟಿ ನೀಡಲಿದ್ದಾರೆ. ಸಭಾಕಾರ್ಯಕ್ರಮದಲ್ಲಿ ಮುದ್ರಕ ಕಾರ್ಮಿಕರ ಮಕ್ಕಳ ವಿದ್ಯಾನಿಧಿ ಬಿಡುಗಡೆ, ವಿತರಣೆ ಹಾಗೂ ಕಾರ್ಯಾಗಾರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಸಂಘಟಿತ ಮುದ್ರಣ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎನ್. ರಾಜೇಂದ್ರ ಬಂಗೇರ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಂಟ್ವಾಳ ಪ್ರಿಂಟರ್ಸ್ ಎಸೋಸಿಯೇಶನ್ನ ಅಧ್ಯಕ್ಷ ಈಶ್ವರ ಭಟ್ ಎಸ್. ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಮುದ್ರಣ ವಿಭಾಗದ ಮಾಲಕ ಮತ್ತು ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಯಾದವ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.