Saturday, April 13, 2024

ಫೆ.17: ಮುಹಿಮ್ಮಾತ್ ಉರೂಸ್ ಪ್ರಚಾರ ಸಭೆ

ವಿಟ್ಲ: ಸೈಯದ್ ತ್ವಾಹಿರುಲ್ ಅಹ್ದಲ್ (ಖ.ಸಿ)ತಂಙಳರವರ ನೇತೃತ್ವದಲ್ಲಿ ಕಳೆದ ಇಪ್ಪತ್ತೇಳು ವರ್ಷಗಳಿಂದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಕಟ್ಟತಡುಕ್ಕ ಎಂಬಲ್ಲಿ ಕಾರ್‍ಯಾಚರಿಸುತ್ತಿರುವ ಮುಹಿಮ್ಮಾತ್ ವಿದ್ಯಾ ಸಂಸ್ಥೆಯ ಮಹಾ ಸಮ್ಮೇಳನ ಹಾಗೂ ಉರೂಸ್ ಮುಬಾರಕ್ 2019 ಎಪ್ರಿಲ್ 13,14,15 ರಂದು ನಡೆಯಲಿದೆ. ಇದರ ಪ್ರಚಾರಾರ್ಥವಾಗಿ ಫೆ. 17 ರಂದು ಕರ್ನಾಟಕ ಹಳೆ ವಿದ್ಯಾರ್ಥಿಗಳ ಬೃಹತ್ ಸಂಗಮವು ಮುಹಿಮ್ಮಾತ್ ಕ್ಯಾಂಪಸ್‌ನಲ್ಲಿ ನಡೆಯಲಿದೆ.
ಕರುನಾಡಿನ ಆಶಾ ಕೇಂದ್ರವಾದ ಮುಹಿಮ್ಮಾತಿನಲ್ಲಿ ಶೇಕಡ ಎಂಭತ್ತೈದರಷ್ಟು ಕನ್ನಡಿಗರೇ ಆಗಿದ್ದು ಇದೀಗ ಪೂರ್ವ ಕಾಲದಲ್ಲಿ ವಿದ್ಯೆ ಕಲಿತ ವಿದ್ಯಾರ್ಥಿಗಳ ಸಂಗಮಕ್ಕೆ ಫೆಬ್ರವರಿ 17 ಮುಹಿಮ್ಮಾತ್ ಸಾಕ್ಷಿಯಾಗಲಿದೆ. ಸಯ್ಯಿದ್ ಮುನೀರುಲ್ ಅಹ್ದಲ್, ಸಯ್ಯಿದ್ ಹಾಮಿದ್ ಅನ್ವರ್ ಅಹ್ದಲ್, ಬಿ. ಎಸ್ ಅಬ್ದುಲ್ಲ ಕುಂಞಿ ಫೈಝಿ, ಹಂಝ ಮದನಿ ಮಿತ್ತೂರ್, ಅಬ್ದುಲ್ ಖಾದರ್ ಸಖಾಫಿ ಮೊಗ್ರಾಲ್, ಮೂಸ ಸಖಾಫಿ ಕಳತ್ತೂರ್, ಅಬ್ದುಲ್ ಅಝೀಝ್ ಮಿಸ್ಬಾಹಿ, ಉಮರ್ ಸಖಾಫಿ ಕರ್ಣೂರ್, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಸಯ್ಯಿದ್ ಶರಫುಧ್ಧೀನ್ ಹಿಮಮಿ ಎರುಮಾಡ್, ಹಾಫಿಲ್ ಸುಫ್ಯಾನ್ ಸಖಾಫಿ , ಮುಸ್ತಫಾ ಹಿಮಮಿ ಮೊಂಟುಗೋಳಿ, ತಾಜುದ್ದೀನ್ ಕರಾಯ,ಅಬೂಬಕರ್ ಹಿಮಮಿ ವಿಟ್ಲ, ಖಲೀಲ್ ಹಿಮಮಿ ಕೊಟ್ಟಮುಡಿ ಮುಂತಾದ ಗಣ್ಯ ವ್ಯಕ್ತಿಗಳು ನೇತೃತ್ವ ವಹಿಸಲಿದ್ದಾರೆ.
ಮುಹಿಮ್ಮಾತಿನ ನಾನಾ ಸಂಸ್ಥೆಗಳಲ್ಲಿ ವಿದ್ಯಾರ್ಜಿಸಿದ ಕರ್ನಾಟಕದ ವಿದ್ಯಾರ್ಥಿಗಳು ಈ ಕಾರ್‍ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕಾಗಿ ಪ್ರಚಾರ ಸಮಿತಿಯ ವಿಟ್ಲ ವಿಭಾಗದ ಎಸ್ ಪಿ. ಹಂಝ ಸಖಾಫಿ ಹಾಗೂ ವಕೀಲ ಶಾಕಿರ್ ಮಿತ್ತೂರು ತಿಳಿಸಿದ್ದಾರೆ.

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...