Thursday, April 11, 2024

*ವಚನ*

ಕೆಟ್ಟದು ಮಾಡಿ ಇಟ್ಟುಕೊಂಡು ಕಲ್ಮಶಗಳ
ಉದ್ದೇಶ ಸಾಧನೆಗೆ ಹೊರಟಿಹರು ನೋಡಯ್ಯಾ|
ಹುಡುಕುಡುಕಿ ನಿನ್ನ ಗುಡಿ ಗೋಪುರಗಳ
ಎಡೆಬಿಡದೆ ಎಡತಾಕಿ ಎಡೆ ನೀಡುವರಯ್ಯಾ||
ಹೊರಗೆ ದುರಾಸೆಗಳಲ್ಲಿ ಕೊಬ್ಬಿ ಮೆರೆದು
ಕಷ್ಟ ಬಂದಾಗ ನಿನ್ನ ನಾಮ ಸ್ಮರಿಸಿ|
ವಿವಿಧ ಪೂಜೆ ಹರಕೆಗಳ ಮೂಲಕ ನಿನಗೆ
ಬೇಕಾದಂತೆ ಆಮಿಷ ಒಡ್ಡುವರಲ್ಲಯ್ಯಾ||
ಕಪಟವಿಲ್ಲದ ಮನಗಳಿಗೆ ಬೇಕಿಲ್ಲ ಇದಾವುದು
ಬಲ್ಲವರಾರು ಮಾಡುವ ಕೆಲಸದಲ್ಲಿ ಒಳ್ಳೆಯದು|
ಕುಳಿತಲ್ಲೇ ನಿಷ್ಕಲ್ಮಶದಿಂದ ತೋರಿದರೆ ಭಕ್ತಿ
ಒಲಿದೊಲಿದು ಬರುವನು ಕೇಳಯ್ಯಾ
ಬೇಡ ಬೇಡವೆಂದರೂ ನನ್ನೇಶ್ವರ||

 

*ಬಸವರಾಜ ಕಾಸೆ*

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...