Saturday, April 20, 2024

ಗೋಸಾಗಾಟ ಮಾಹಿತಿದಾರರ ಕೇಸು ಹಾಕುತ್ತಿರುವ ಪೊಲೀಸ್ ಇಲಾಖೆ: ವಿಹೆಚ್‌ಪಿ, ಬಜರಂಗದಳ ಆರೋಪ

ವಿಟ್ಲ: ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಹತ್ಯೆಗಾಗಿ ಅಕ್ರಮ ಸಾಗಾಟ ನಡೆಯುತ್ತಿದೆ. ಪೊಲೀಸರು ಅಕ್ರಮ ಗೋ ಸಾಗಾಟ ನಡೆಸುವವರ ಮೇಲೆ ಕೇಸು ಹಾಕದೇ, ಇದನ್ನು ತಡೆಯುವ ಹಿಂದೂ ಸಂಘಟನೆಯವರ ಮೇಲೆ ಕೇಸು ಹಾಕಲಾಗುತ್ತಿದೆ. ಕಳೆದ ಬಾರಿ ವಿಟ್ಲ ಪ್ರಖಂಡ ವ್ಯಾಪ್ತಿಯಲ್ಲಿ 19 ಪ್ರಕರಣಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನ್ನು ಪತ್ತೆಹಚ್ಚಲಾಗಿದೆ. ಗೋ ರಕ್ಷಣೆಗೆ ಮುಂದಾಗುವವರನ್ನು ರೌಡಿ ಶೀಟರ್ ಗಳು ಎಂದಾದರೆ ಇದನ್ನು ಉಗ್ರವಾಗಿ ಖಂಡಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್ ವಿಟ್ಲ ಪ್ರಖಂಡ ಕಾರ್‍ಯದರ್ಶಿ ಪದ್ಮನಾಭ ಕಟ್ಟೆ ತಿಳಿಸಿದರು.
ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಸಂಘಟನೆಗಳ ಸದಸ್ಯರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು.
ಬಜರಂಗದಳ ಸಂಚಾಲಕ ಅಕ್ಷಯ್ ರಜಪೂತ್ ಕಲ್ಲಡ್ಕ ಮಾತನಾಡಿ ತಿಂಗಳಲ್ಲಿ ಬಕ್ರೀದ್ ಬರುವ ಹಿನ್ನೆಲೆಯಲ್ಲಿ ಅಕ್ರಮ ಗೋಸಾಗಾಟ ಹೆಚ್ಚಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕೇರಳಕ್ಕೆ ಅಂಟಿಕೊಂಡಿರುವ ವಿಟ್ಲ ಠಾಣೆಯ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ಹಾಕುವ ಮೂಲಕ ಅಕ್ರಮ ಗೋಸಾಗಾಟವನ್ನು ತಡೆಯಲು ಮುಂದಾಗಬೇಕು ಮತ್ತು ಅದರ ಹಿಂದೆ ಇರುವ ಆರೋಪಿಗಳನ್ನು ಬಂಧಿಸಬೇಕು. ಇದನ್ನು ಮಾಡದಿದ್ದರೆ ಸಂಘಟನೆಗಳು ಬೀದಿಗೆ ಇಳಿದು ಗೋರಕ್ಷಣೆ ಮಾಡಲು ಮುಂದಾಗಬೇಕಾಗುತ್ತದೆ ಎಂದು ತಿಳಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್‍ಯದರ್ಶಿ ಜಯಂತ್ ಸಿ.ಎಚ್ ವಿಟ್ಲ, ವಿಟ್ಲ ಪ್ರಖಂಡ ಕಾರ್‍ಯದರ್ಶಿ ಚರಣ್ ಕಾಪುಮಜಲು, ಉಪಾಧ್ಯಕ್ಷ ಜಯಕೊಟ್ಟಾರಿ, ಬಜರಂಗದಳ ಸಹ ಗೋರಕ್ಷ ಪ್ರಮುಖ್ ಯತೀಶ್ ಪೆರುವಾಯಿ ಉಪಸ್ಥಿತರಿದ್ದರು.

More from the blog

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...