Wednesday, October 18, 2023

ವಿಟ್ಲ: ಎಸ್ಸೆಸ್ಸೆಲ್ಸಿ ಟಾಪರ್‌ಗೆ ಸನ್ಮಾನ

Must read

ವಿಟ್ಲ: ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಇವರನ್ನು ಅವರ ಮನೆ ಶ್ರೀ ಲಕ್ಷ್ಮೀನಿಲಯದಲ್ಲಿ ಮಾಜಿ ಸಚಿವ ರಮಾನಾಥ ರೈಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಮತ್ತು ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯಿತಿ ಸದಸ್ಯೆ ಶೋಭಾ ರೈ, ಪಂಚಾಯಿತಿ ಸದಸ್ಯ ಸಿದ್ದಿಕ್ ಸರಾವು, ವಿಟ್ಲಪಡ್ನೂರು ವಲಯಾಧ್ಯಕ್ಷ ಸಂದೇಶ್ ಶೆಟ್ಟಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ರೈ, ರಮಾನಾಥ ವಿಟ್ಲ, ಭಾಸ್ಕರ ಶೆಟ್ಟಿ ಬಿ, ಚಿನ್ಮಯಿ ಅಜ್ಜ ಅಜ್ಜಿ ಜಯರಾಮ ಭಟ್ ದಂಪತಿಗಳು, ತಂದೆ ತಾಯಿ ರಾಜನಾರಾಯಣ ಭಟ್ ದಂಪತಿಗಳು ಮತ್ತಿತರರು ಉಪಸ್ಥಿತರಿದ್ದರು.

More articles

Latest article