ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾಕುಮಾರಸ್ವಾಮಿ ಅವರ ತಂದೆ ಉದ್ಯಮಿ ದೇವರಾಜ್ ಅವರು ಇಂದು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಉದ್ಯಮಿ ದೇವರಾಜ್ ಅವರು ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಹೇಳಲಾಗುತ್ತಿದೆ.
ಕಳೆದ ವಾರ ಇವರ ವಿಟ್ಲ ಸಮೀಪದ ಸಾಲೆತ್ತೂರು ಮನೆಯಲ್ಲಿ ದೈವಗಳ ನೇಮ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆದಿತ್ತು. ಆ ಬಳಿಕ ಇವರಿಗೆ ಆರೋಗ್ಯ ದಲ್ಲಿ ಏರುಪೇರು ಕಂಡು ಬಂದಿತ್ತು.
ಹಾಗಾಗಿ ಇವರನ್ನು ಬೆಂಗಳೂರು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ.
ರಾಧಿಕಾ ಅವರ ತಂದೆ ದೇವರಾಜ್ ಅವರು ಮೂಲತಃ ಮಂಗಳೂರಿನವರು ಬಳಿಕ ಉದ್ಯಮ ಕ್ಷೇತ್ರದಲ್ಲಿ ಬೇರೆ ಬೇರೆ ಕಡೆಗಳಿಗೆ ಪ್ರವಾಸ ಕೈಗೊಂಡ ಬಳಿಕ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ವಾಸ ಮಾಡುತ್ತಿದ್ದರು. ಇವರ ಅಂತಿಮ ಸಂಸ್ಕಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.