Sunday, April 7, 2024

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ನಾನಾ ಸಂಘಗಳ ಉದ್ಘಾಟನೆ

ಅಡ್ಯನಡ್ಕ : ಜನತಾ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ ನಾನಾ ಸಹಪಠ್ಯ ಸಂಘಗಳನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ, ಸಂಪನ್ಮೂಲ ವ್ಯಕ್ತಿ ಎಂ. ನಾರಾಯಣ ಉಪಾಧ್ಯಾಯ ಅವರು ಸಾಹಿತ್ಯ ಸಂಘ, ಗ್ರಾಹಕ ಸಂಘ, ಕ್ರೀಡಾ ಸಂಘ, ಸಮಾಜ ವಿಜ್ಞಾನ ಸಂಘ, ವಿಜ್ಞಾನ ಮತ್ತು ಪರಿಸರ ಸಂಘವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಯಶಸ್ವಿಯಾಗಿ ಹೊರಹೊಮ್ಮಲು ಸಹಪಠ್ಯ ಚಟುವಟಿಕೆಗಳು ಪೂರಕವಾಗಿವೆ. ಕಲಿಕೆಯಲ್ಲಿ ಏಕತಾನತೆಯನ್ನು ನಿವಾರಿಸಿ ತನ್ಮಯತೆಯಿಂದ ತೊಡಗಿಕೊಳ್ಳಲು ಅವು ಪ್ರೇರಣೆ ನೀಡುತ್ತವೆ ಎಂದರು.
ಮುಖ್ಯ ಶಿಕ್ಷಕ ಟಿ. ಆರ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಮಾರ್ಗದರ್ಶಿ ಶಿಕ್ಷಕ ಶಿವಕುಮಾರ ಸಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ, ನಾನಾ ಸಂಘಗಳ ಅಧ್ಯಕ್ಷರಾದ ಮಧುರಾ ಬಿ., ವಿಜೇತ ಎಂ, ಬಲ್ಕೀಸಾಬಾನು, ಸಹನಕುಮಾರಿ ಎ. ಹಾಗೂ ರಶ್ಮಿತಾ ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜ್ಞಾನ ಶಿಕ್ಷಕಿ ಕುಸುಮಾವತಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಮೂಹಗಾನ ಮತ್ತು ಭಾಷಣ ಜರುಗಿತು. ಬಲ್ಕೀಸಾಬಾನು ಸ್ವಾಗತಿಸಿದರು. ತೃಪ್ತಿ ವಂದಿಸಿದರು. ಫಾತಿಮತ್ ಅಫೀಝ ಕಾರ್‍ಯಕ್ರಮ ನಿರೂಪಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...