ವಿಟ್ಲ: ವಿಟ್ಲ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಭಾನುವಾರ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕೋಟಿ-ಚೆನ್ನಯ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಉದ್ಘಾಟಿಸಿ ಕ್ರೀಡಾಕೂಟದೊಂದಿಗೆ ಸಂಘಟನಾ ಶಕ್ತಿಯನ್ನು ಹೆಚ್ಚಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಡಾ. ಗೀತಪ್ರಕಾಶ್ ಮಾತನಾಡಿ ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡಾಗ ಮಾತ್ರ ಕ್ರೀಡಾಕೂಟಗಳು ಅರ್ಥಪೂರ್ಣವೆನಿಸುವುದು. ಬಿಲ್ಲವ ಸಮಾಜದ ಯುವಶಕ್ತಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಗಳಾದಾಗ ಮಾತ್ರ ಸಂಘಟನೆ ಸದೃಢವಾಗಿ ಬೆಳೆಯಬಹುದು ಎಂದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಸುಜಾತ ಸಂಜೀವ ಪೂಜಾರಿ, ಪುಷ್ಪಾ ಸುಂದರ ಪೂಜಾರಿ ಉಕ್ಕುಡ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಸುವರ್ಣ, ನಿರ್ದೇಶಕರಾದ ಮಾಧವ ಪಟ್ಲ, ರಮೇಶ್ ಕುಮಾರ್ ಆರ್.ಎಸ್., ಕ್ರೀಡಾ ಕಾರ್ಯದರ್ಶಿ ಜಯಪ್ರಕಾಶ್ ಪಾಣೆಮಜಲು, ಉದ್ಯಮಿ ಹರೀಶ್ ವಿಟ್ಲ, ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಜಯಂತ ಪಿ. ಸ್ವಾಗತಿಸಿದರು. ನಿರ್ದೇಶಕ ಸಂಜೀವ ಎಂ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಭೆಯ ಬಳಿಕ ಮಕ್ಕಳ ವಿಭಾಗ, ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ನಾನಾ ತಂಡ ಹಾಗೂ ವೈಯಕ್ತಿಕ ಆಟೋಟಗಳು ನಡೆದವು.