Sunday, October 22, 2023

ಸಾಲೆತ್ತೂರು: ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Must read

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯದ ಸಾಲೆತ್ತೂರು ವಲಯದ ಕಟೀಲೇಶ್ವರಿ ಹಾಗೂ ಉಜ್ವಲ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಕಾರ್‍ಯಕ್ರಮ ಸಾಲೆತ್ತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಇದರ ಉದ್ಘಾಟನೆಯನ್ನು ವಿಟ್ಲ ಯೋಜನಾಧಿಕಾರಿ ಮೋಹನ್ ಕೆ. ಮಾಡಿ ಯೋಜನೆ ಹಾಗೂ ಜ್ಞಾನ ವಿಕಾಸದ ಕಾರ್‍ಯಕ್ರಮಗಳ ಮಾಹಿತಿ ನೀಡಿದರು. ಸಾಲೆತ್ತೂರು ಒಕ್ಕೂಟದ ಅಧ್ಯಕ್ಷರಾದ ಶೇಖರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಗೆಳತಿ ವಿಭಾಗದ ಆಪ್ತ ಸಮಾಲೋಚಕಿ ಚೈತನ್ಯರವರು ಕೌಟುಂಬಿಕ ಸಾಮರಸ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್‍ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.
ಮೇಲ್ವಿಚಾರಕಿ ಸುಜಾತ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಹೇಮಲತಾ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಕಾರ್‍ಯಕ್ರಮ ನಿರೂಪಿಸಿದರು.

 

 

More articles

Latest article