ಬಂಟ್ವಾಳ: ಬೆಳಿಗ್ಗಿನಿಂದಲೆ ಸುರಿದ ಭಾರೀ ಮಳೆಗೆ ಬಂಟ್ವಾಳದ ಇಂದಿರಾ ಕ್ಯಾಂಟೀನ್ ನ ಆವರಣ ಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಬಿ.ಸಿ.ರೋಡಿನ ಮಿನಿ ವಿಧಾನ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಹಾಗೂ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಇಂದಿರಾ ಕ್ಯಾಂಟೀನ್ ನ ಆವರಣ ಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಜರೆಯ ಮಣ್ಣು ಮೃದುಗೊಂಡ ಪರಿಣಾಮ ಆವರಣ ಗೋಡೆ ಕುಸಿದಿದೆ ಎನ್ನಲಾಗಿದೆ.
ಅದಲ್ಲದೆ, ಮಳೆ ನೀರು ಹೋಗಲು ಸರಿಯಾದ ಜಾಗವಿಲ್ಲದೆ ಇಲ್ಲಿಯೇ ಶೇಖರಣೆಗೊಂಡು ಜರೆ ಕುಸಿದಿದೆ ಎಂದು ಸ್ಥಳೀಯರು ಆರೋಪಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಭೇಟಿ, ನೀಡಿ ಪರಿಶೀಲನೆ ನಡೆಸಿ ದರು. ಕಳಪೆ ಕಾಮಗಾರಿಯಿಂದ ಈ ಅನಾಹುತ ಸಂಭವಿಸಿದೆ ಎಂದು ಪ್ರಜ್ಞಾವಂತ ನಾಗರಿಕರು ದೂರಿದ್ದಾರೆ.