ಬಂಟ್ವಾಳ: ಲೋಕೋಪಯೋಗಿ ಇಲಾಖೆಯ ಬಂಟ್ವಾಳ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ 5 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ, ಪದೋನ್ನತಿ ಹೊಂದಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿ ನಿಯುಕ್ತಿಗೊಂಡ ಉಮೇಶ್ ಭಟ್ ವೈ ರವರಿಗೆ ಬಂಟ್ವಾಳ ಲೋಕೋಪಯೋಗಿ ಉಪವಿಭಾಗದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಮೃತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎ.ಇ.ಇ. ರೋಹಿತ್ ದಾಸ್, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗದ ಎ.ಇ.ಇ. ಮಹೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಉಪವಿಭಾಗದ ಇಂಜಿನಿಯರ್ ಗಳಾದ ಪ್ರೀತಮ್, ರವೀಂದ್ರನಾಥ ಶೆಟ್ಟಿ, ಶ್ರೀಕೃಷ್ಣ, ಜಗದೀಶ್, ಅಜಿತ್, ಕುಶಕುಮಾರ್ ಉಪಸ್ಥಿತರಿದ್ದರು. ಇಂಜಿನಿಯರ್ ಅರುಣ್ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಬಂಟ್ವಾಳ ಉಪವಿಭಾಗದ ವತಿಯಿಂದ ಉಮೇಶ್ ಭಟ್ ಅವರನ್ನು ನೆನಪಿನ ಕಾಣಿಕೆಯ ಜೊತೆಗೆ ಸನ್ಮಾನಿಸಿ ಬೀಳ್ಕೊಡಲಾಯಿತು.