Sunday, April 14, 2024

ವಿದ್ಯಾರ್ಥಿಗಳು ಸಮಾಜದ ಆಗು, ಹೋಗುಗಳ ಜ್ಙಾನ ವಿಸ್ತರಿಸಬೇಕು : ಪ್ರೋ.ತುಕರಾಂ ಪೂಜಾರಿ

ಬಂಟ್ವಾಳ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯ ಜೊತೆ ಸಮಾಜದ ಆಗು, ಹೋಗುಗಳ ಬಗ್ಗೆಯು ಜ್ಙಾನವನ್ನು ವಿಸ್ತರಿಸಬೇಕು ಎಂದು ಬಿ.ಸಿ.ರೋಡಿನ  ರಾಣಿ ಅಬ್ಬಕ್ಕ ತುಳು ಅಧ್ಯಯನ  ಕೇಂದ್ರದ ಅಧ್ಯಕ್ಷ ಪ್ರೋ.ತುಕರಾಂ ಪೂಜಾರಿ ತಿಳಿಸಿದ್ದಾರೆ. ಬಿ.ಸಿ.ರೋಡಿ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜಸೇವಾ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್,ಇಂಟರ್ ನೆಟ್ ಇತ್ಯಾದಿಗಳನ್ನು ತಮ್ಮ ಜ್ಙಾನದ ಬೆಳವಣಿಗೆಗೆ ಬಳಸಿಕೊಳ್ಳಬೇಕೇ ವಿನಹ ಅದನ್ನೊಂದು ದುಶ್ಚಟವನ್ನಾಗಿಸಬಾರದು ಎಂದು ಕಿವಿಮಾತು ಹೇಳಿದರು.

ಇನ್ನೋರ್ವ ಅತಿಥಿಯಾಗಿದ್ದ ಮಂಗಳೂರು ಐಎಎಸ್ ಆಕಾಡೆಮಿ ನಿರ್ದೇಶಕ ಸುರೇಶ್ ಮಾತನಾಡಿ, ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಉತ್ತಮವಾದ ಉದ್ಯೋಗ ಪಡೆಯಲು ವಿವಿಧ ಪರೀಕ್ಷೆಯನ್ನು ಯಾವರೀತಿ ಎದುರಿಸಬೇಕೆಂಬುದರ ಕುರಿತು ಮಾಹಿತಿ ನೀಡಿದರು.ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು.ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಉಪಾಧ್ಯಕ್ಷಬೊಳ್ಳುಕಲ್ಲು ನಾರಾಯಣ ಪೂಜಾರಿ, ಲೆಕ್ಕಪರಿಶೋಧಕ ಬಿ.ಸತೀಶ್, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್,  ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಸಮಾಜದ 37 ವಿದ್ಯಾರ್ಥಿಗಳಿಗೆ ಒಟ್ಟು 2.75 ಲಕ್ಷ ರೂ.ಪ್ರೋತ್ಸಾಹಧನವನ್ನು ಸಂಘದ ವತಿಯಿಂದ ವಿತರಿಸಲಾಯಿತು. ಸಂಘದ ಪ್ರ.ಕಾರ್ಯದರ್ಶಿ ರಮೇಶ್ ತುಂಬೆ ಪ್ರಸ್ತಾವಿಸಿ, ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಸುವರ್ಣ ವಂದಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...