Sunday, April 7, 2024

ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ

ಬಂಟ್ವಾಳ: ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರು ಶುಕ್ರವಾರ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ,ಇಲ್ಲಿನ ಬೇಡಿಕೆಯ ಕುರಿತು ಮಾಹಿತಿ ಪಡೆದುಕೊಂಡರು.

ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾಶಿವ ಅವರು  ಆಸ್ಪತ್ರೆಗೆ ತುರ್ತಾಗಿ ಅರಿವಳಿಕೆ ತಜ್ಙರ ಅಗತ್ಯವಿರುವುದನ್ನು ಶಾಸಕರ ಗಮನಕ್ಕೆ ತಂದರು.ಹಾಗೆಯೇ ಪ್ರಯೋಗಶಾಲೆಯಲ್ಲಿ ರಕ್ತಮಾದರಿ ಪರೀಕ್ಷೆಯ ತಜ್ಙರು, ಎಕ್ಸರೇ ತಜ್ಙರು,ನಸ್೯, ಸಿಬಂದಿಗಳ  ಹುದ್ದೆ ಖಾಲಿರುವುದನ್ನು ಶಾಸಕರ ಗಮನಕ್ಕೆ ತರಲಾಯಿತು. ತಾತ್ಕಾಲಿಕ ನೆಲೆಯಲ್ಲಿ ಕೆಲ ಸಮಯಗಳ ಕಾಲ ಇದ್ದಂತ ಅರಿವಳಿಕೆ ತಜ್ಙರು ಈಗ ಬಾರದಿದ್ದುರಿಂದ ಮತ್ತೆ ಸಮಸ್ಯೆ ಉಂಟಾಗುತ್ತಿದೆ ಎಂದು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಮಾಹಿತಿನೀಡಿದರು.  ಈ ಸಂದರ್ಭ ಉಪಸ್ಥಿತರಿದ್ದ ಎ.ಜೆ.ಸಮೂಹ ಸಂಸ್ಥೆಯ ಡಾ.ಪ್ರಶಾಂತ್ ಮಾರ್ಲ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಕೋರಿಕೆಯಂತೆ ತಾತ್ಕಾಲಿಕ ನೆಲೆಯಲ್ಲಿ ಕೆಲ ವೈದ್ಯರನ್ನು ಹಾಗು ರಕ್ತ ಪರೀಕ್ಷೆ ತಜ್ಙರನ್ನು ಒದಗಿಸಿಕೊಡುವ ಮತ್ತು ವಾಷಿಂಗ್ ಮೆಶಿನ್ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆ ನೀಡಿದರು.   ಇಲ್ಲಿನ ಅಪರೇಶನ್ ಥಿಯೇಟರ್ ವ್ಯವಸ್ಥಿತವಾಗಿದೆ.ಅರಿವಳಿಕೆ ತಜ್ಙರಿದ್ದರೆ ಇಲ್ಲೇ ಎಲ್ಲಾ ರೀತಿ ಅಪರೇಶನ್ ಮಾಡಬಹುದಾಗಿದೆ ಎಂದು ಡಾ.ಪ್ರಶಾಂತ್ ಮಾರ್ಲ ಶಾಸಕರ ಗಮನಕ್ಕೆ ತಂದರು. ಬಂಟ್ವಾಳ ಕ್ಷೇತ್ರದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆ ಮತ್ತು ಬೇಕಾದ ಸೌಲಭ್ಯಗಳ ಬಗ್ಗೆ ವಿವರವಾದ ಪಟ್ಟಿ ನಿಉಡುವಂತೆ ಶಾಸಕ ರಾಜೇಶ್ ನಾಯ್ಕ್ ತಾಲೂಕು ಆರೋಗ್ಯಧಿಕಾರಿ ಡಾ.ದೀಪಾ ಪ್ರಭುವಿಗೆ ಸೂಚಿಸಿದರು.ತಾಲೂಕಿನಲ್ಲಿ ಡೆಂಗ್ಯ,ಮಲೇರಿಯಾದಂತ ಸಾಂಕ್ರಾಮಿಕ ರೋಗದ ಕುರಿತು ಶಾಸಕರು ಆರೋಗ್ಯಾಧಿಕಾರಿಯವರಿಂದ ಮಾಹಿತಿ ಪಡೆದು ಈ ಬಗ್ಗೆ ಜನರಿಗೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವಂತೆಯು ನಿರ್ದೇಶಿಸಿದರು.   ಪುಂಜಾಲಕಟ್ಟೆ ಆಸ್ಪತ್ರೆ ಮೇಲ್ದರ್ಜೆಗೇರಿದರೆ ಒತ್ತಡ ಕಡಿಮೆ;  ಈಗಾಗಲೇ ದಿನವೊಂದಕ್ಕೆ ತಾಲೂಕಿನ ಮೂಲೆ,ಮೂಲೆಯಿಂದ ಸಾವಿರಾರು ರೋಗಿಗಳು  ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಆಗಮಿಸುತ್ತಿದ್ದು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿದರೆ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಒತ್ತಡ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ತಿಳಿಸಿದರು.ವಾಮದಪದವು ಸಮುದಾಯ ಆರೋಗ್ಯಕೇಂದ್ರದಲ್ಲೂ ಸಕಲ ವ್ಯವಸ್ಥೆಯಿದ್ದರೂ,ಅಲ್ಲು ವೈದ್ಯರ ಕೊರತೆ ಎದುರಿಸಲಾಗುತ್ತಿದೆ ಎಂದರು.ಪುಂಜಾಲಕಟ್ಟೆ ಪ್ರಾ.ಆ.ಕೇ.ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.   ಇದೇ ವೇಳೆ ಗುತ್ತಿಗೆಯಾಧಾರದಲ್ಲಿ ದುಡಿಯುವ ‘ಡಿ’ ಗ್ರೂಪ್ ನೌಕರರು ನಿಗದಿತ ಸಮಯದಲ್ಲಿ ವೇತನ ಪಾವತಿಯಾಗದ ಬಗ್ಗೆ ಶಾಸಕರಲ್ಲಿ ಅವಲತ್ತುಕೊಂಡರು.ಈ ಕುರಿತು ಈಗಾಗಲೇ ಸಂಬಂಧಪಟ್ಟವರಲ್ಲಿ ಚರ್ಚಿಸಲಾಗಿದೆ.ಎರಡು ತಿಂಗಳ ವೇತನ ಪಾವತಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು. ಸೆಕ್ಯೂರಿಟಿ ನೇಮಿಸಿ: ಹಾಗೆಯೇ ಆಸ್ಪತ್ರೆಗೆ ಹಗಲು ಮತ್ತು ರಾತ್ರಿ ವೇಳೆ ಸೆಕ್ಯೂರಿಟಿ ವ್ಯವಸ್ಥೆ ಕಲ್ಪಿಸುವಂತೆ ನೌಕರರು ಶಾಸಕರಲ್ಲಿ ಮನವಿ ಮಾಡಿದರು.ವೈದ್ಯಾಧಿಕಾರಿ ಡಾ.ಸದಾಶಿವ ಅವರು ಇದಕ್ಕೆ ಧ್ವನಿಗೂಡಿಸಿ ರಾತ್ರಿ ವೇಳೆ ಕೆಲವರು ಅಮಲು ಪದಾರ್ಥ ಸೇವಿಸಿ ಆಸ್ಪತ್ರೆಗೆ ಬಂದು  ಅಸಭ್ಯವಾಗಿ ವರ್ತಿಸುತ್ತಿದ್ದು,ಪೊಲೀಸರೊಬ್ಬರನ್ನೇ ನೇಮಿಸುವಂತೆ ವಿನಂತಿಸಿದರು.ಆಸ್ಪತ್ರೆಯಲ್ಲೇ ಒ.ಪಿ.ತೆರೆದು ಹಗಲು,ರಾತ್ರಿ ಪೊಲೀಸ್ ಕಾನ್ಸಟೇಬಲ್ ಒಬ್ಬರನ್ನು ನಿಯುಕ್ತಿಗೊಳಿಸುವುದು ಸೂಕ್ತ ಎಂದು ಉಪಸ್ಥಿತರಿದ್ದ ಪುರಸಭಾ ಸದಸ್ಯ ಗೋವಿಂದ ಪ್ರಭು,ಮಾಜಿ ಸದಸ್ಯ ದೇವದಾಸ ಶೆಟ್ಟಿ ಸಲಹೆ ನೀಡಿದರು.ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಭದ್ರತೆಯ ದೃಷ್ಟಿಯಿಂದ ಆಸ್ಪತ್ರೆಗೆ ಪೂರ್ಣಕಾಲಿಕವಾಗಿ ಕಾನ್ಸ್ ಟೇಬಲ್ ರೊಬ್ಬರನ್ನು ನಿಯುಕ್ತಿಗೊಳಿಸಲು ಸೂಚಿಸಿದರು.   ಇದಕ್ಕು ಮೊದಲು ಆಸ್ಪತ್ರೆಯ ಪ್ರತಿ ವಿಭಾಗಕ್ಕು ಭೇಟಿ ನೀಡಿ ಪರಿಶೀಲಿಸಿದ ಶಾಸಕ ರಾಜೇಶ್ ನಾಯ್ಕ್ ,ಅಲ್ಲಿದ್ದ ವೈದ್ಯರು,ರೋಗಿಗಳೊಂದಿಗೆ ಮಾತನಾಡಿದರು. ಆಸ್ಪತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೋಗಿಗಳನ್ನು ಕಂಡು ಅಚ್ಚರಿಗೊಳಗಾದರು.  ಈ ಸಂದರ್ಭ ಪುರಸಭಾ ಸದಸ್ಯರಾದ ಹರಿಪ್ರಸಾದ್,ಸರಪಾಡಿ ಗ್ರಾಪಂ ಸದಸ್ಯ ಧನಂಜಯ ಶೆಟ್ಟಿ ಮೊದಲಾದವರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...