


ಇಂದು ದೇಶದಾದ್ಯಂತ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ್ ಅನ್ನು ಆಚರಿಸಲಾಗುತ್ತಿದೆ. ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಈ ಹಬ್ಬವನ್ನು ಬಕ್ರೀದ್ ಮುಸ್ಲೀಮರ ಪ್ರಮುಖ ಹಬ್ಬಗಳಲ್ಲಿ ಒಂದು.
ಈ ಪವಿತ್ರ ಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ ತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ ಎಂಬ ಸಂದೇಶದೊಂದಿಗೆ ರಾಷ್ಟ್ರಪತಿಗಳು ಶುಭ ಹಾರೈಸಿದ್ದಾರೆ.
ಬಕ್ರೀದ್ ಹಬ್ಬದ ಶುಭಾಶಯಗಳೊಂದಿಗೆ, ಈ ಹಬ್ಬ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿಯ ಆತಂಕವಿದ್ದರೂ ಈದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತೀಯ ಸೇನೆಯ ರಕ್ಷಣೆಯಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆಯುತ್ತಿವೆ.







