Wednesday, October 25, 2023

ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ವಿಧಿವಶ

Must read

ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ, ಅನಾರೋಗ್ಯದ ಹಿನ್ನೆಲೆಯಲ್ಲಿ , ತೀವ್ರ ನಿಗಾ ಘಟಕದಲ್ಲಿಟ್ಟು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಏಮ್ಸ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಶ್ವಾಸಕೋಶದಲ್ಲಿ ನೀರು ತುಂಬಿದ್ದು, ಈ ಕಾರಣದಿಂದ ಅವರಿಗೆ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿತ್ತು ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಜೇಟ್ಲಿ ಬಹಳ ವರ್ಷಗಳಿಂದ ಮಧುಮೇಹ ಪೀಡಿತರಾಗಿದ್ದು, ಅವರಿಗೆ ಕಿಡ್ನಿ ಕಸಿಯನ್ನು ಸಹ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಸಾಫ್ಟ್ ಟಿಸ್ಯೂ ಕ್ಯಾನ್ಸರ್ ಇದೆ ಎಂಬುದು ಪತ್ತೆಯಾಗಿತ್ತು. ಸ್ಥೂಲಕಾಯದಿಂದ ಮುಕ್ತಿ ಪಡೆಯಲು ಅವರು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಸಹ ಒಳಗಾಗಿದ್ದರು.

66 ವರ್ಷದ ಹಿರಿಯ ನಾಯಕರಾದ ಅರುಣ್ ಜೇಟ್ಲಿ ಮೋದಿ ಸರಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಯನ್ನೆದುರಿಸಿರಲಿಲ್ಲ.

More articles

Latest article