ಬಂಟ್ವಾಳ : ಬಂಟ್ವಾಳ ತಾ| ವಾಮದಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 36 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸೆ.1 ರಿಂದ ಸೆ. 3ರವರೆಗೆ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಜರಗಲಿದೆ.
ಸೆ.೧ರಂದು ಬೆಳಗ್ಗೆ ಧ್ವಜಾರೋಹಣ, ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ. ವಿಶೇಷ ಗಣ ಹೋಮ, ಮಹಾಪೂಜೆ ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಅಖಿಲ ಭಾರತ ತುಳು ಒಕ್ಕೂಟ ಮುಂಬ ಅಧ್ಯಕ್ಷ ಧರ್ಮಪಾಲ ದೇವಾಡಿಗ ಅವರು ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ದುರ್ಗಾವಾಹಿನಿ ಸಂಚಾಲಕಿ ವಿದ್ಯಾ ಮಲ್ಯ ಅವರು ಧಾರ್ಮಿಕ ಭಾಷಣ ಮಾಡಲಿರುವರು. ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಭಜನೆ, ರಾತ್ರಿ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಾಂಚಜನ್ಯ-ಶಮಂತೋಪಖ್ಯಾನ ಯಕ್ಷಗಾನ ಬಯಲಾಟ ನಡೆಯಲಿದೆ.
ಸೆ.2ರಂದು ಮಧ್ಯಾಹ್ನ ಕುಟುಂಬ ಪ್ರಭೋಧನ್, ರಾತ್ರಿ ತುಳು ನಾಟಕ ಪ್ರದರ್ಶನ ನಡೆಯಲಿದೆ. ಸೆ.೩ರಂದು ಮಧ್ಯಾಹ್ನ ಸಮಾರೋಪ ನಡೆಯಲಿದೆ. ಸಂಜೆ ಧ್ವಜಾವರೋಹಣ ಬಳಿಕ ಶೋಭಾ ಯಾತ್ರೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.