Tuesday, April 16, 2024

ಟ್ರಾಫಿಕ್ ಎಸ್.ಐ.ಮಂಜುನಾಥ್ ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಬೆಂಗಳೂರು ಸಿ‌.ಐ.ಡಿ ವಿಭಾಗಕ್ಕೆ ಪೋಲೀಸ್ ನಿರೀಕ್ಷಕರಾಗಿ ಪದೋನ್ನತಿಗೊಂಡು ವರ್ಗಾವಣೆ ಅಗಿರುವ ಬಂಟ್ವಾಳ ಟ್ರಾಫಿಕ್ ಎಸ್.ಐ. ಮಂಜುನಾಥ್ ಅವರ ಬೀಳ್ಕೊಡುಗೆ ಕಾರ್ಯಕ್ರಮ ಮೆಲ್ಕಾರ್ ನ ಹೊಟೇಲೊಂದರಲ್ಲಿ ನಡೆಯಿತು.
ಈ ಕಾರ್ಯಕ್ರಮದ ಆಧ್ಯಕ್ಷತೆವಹಿಸಿದ್ದ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ ಅವರು ಮಾತನಾಡಿ ಮಂಜುನಾಥ್ ಅವರು ಒಬ್ಬ ದಕ್ಷ ಅಧಿಕಾರಿಯಾಗಿದ್ದರು.
ಬಂಟ್ವಾಳ ಟ್ರಾಫಿಕ್ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಯ ಮೂಲಕ ಟ್ರಾಫಿಕ್ ಅವ್ಯಸ್ಥೆಗಳನ್ನು ಸರಿಪಡಿಸಿ ಜನಸಾಮಾನ್ಯರಿಗೆ ನೆರವಾಗಿದ್ದರು ಎಂದು ಅವರು ಹೇಳಿದರು.
ಕಾನೂನು ಸರಿಯಾಗಿ ಪಾಲನೆಯಾದಾಗ ಸಂಚಾರಿ ನಿಯಮಗಳು ಕಷ್ಟವಲ್ಲ ಎಂದು ಅವರು ಹೇಳಿದರು.  ಪ್ರತಿಯೊಂದು ನಿಯಮಗಳ ಆರಂಭದಲ್ಲಿ ಕಷ್ಟ ವಾಗುತ್ತದೆ ಆದರೆ ಪ್ರತಿಯೊಬ್ಬರು ಪಾಲಿಸಿದಾಗ ಅಂತಹ ಸಮಸ್ಯೆಗಳು ಉದ್ಬವವಾಗುವುದಿಲ್ಲ ಎಂದು ಅವರು ಹೇಳಿದರು. ‌
ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಮಾತನಾಡಿ ಸರಕಾರಿ ಕೆಲಸದಲ್ಲಿ ಪದೋನ್ನತಿ ಎಂಬುದು ಸುವರ್ಣವಕಾಶ. ಮಾನವೀಯ ಮೌಲ್ಯಗಳನ್ನು ಹೊಂದಿರುವ ಕೆಲಸಗಳು ಪೋಲೀಸ್ ಇಲಾಖೆಯಿಂದ ಹೆಚ್ಚು ಹೆಚ್ಚು ನಡೆದಾಗ ಮಾತ್ರ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಅಂತಹ ಕೆಲಸ ಮಡಿಕೇರಿಯ ಜೋಡುಪಾಲದಲ್ಲಿ ಮಂಜುನಾಥ್ ಎಸ್.ಐ.ಮಾಡಿದ್ದಾರೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಬಂಟ್ವಾಳ ನಗರ ಠಾಣಾ  ಎಸ್.ಐ. ಚಂದ್ರಶೇಖರ್, ವಿಟ್ಲ ಎಸ್.ಐ. ಯಲ್ಲಪ್ಪ, ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ
ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ಟ್ರಾಫಿಕ್ ಎಸ್.ಐ. ರಾಮ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಿಬ್ಬಂದಿ ವಿವೇಕ್ ವಂದಿಸಿದರು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...