ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ತುಂಬೆ ಪ.ಪೂ ಕಾಲೇಜಿನ ಬಾಲಕರ ತಂಡವು ಸತತ 19ನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಸೆ. 7ರಂದು ಪೆರ್ನೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಫೈನಲ್ನಲ್ಲಿ ಪೆರ್ನೆ ಕಾಲೇಜು ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಸಂದರ್ಭದಲ್ಲಿ ಪೆರ್ನೆ ಶ್ರೀರಾಮಚಂದ್ರ ಪ.ಪೂ ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಅವರು ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ತುಂಬೆ ಪ.ಪೂ ಕಾಲೇಜಿನ ಪ್ರಾಂಶುಪಾಲ ಕೆ.ಎನ್ ಗಂಗಾಧರ ಆಳ್ವ, ತುಂಬೆ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ, ಸಾಯಿರಾಮ್ ನಾಯಕ್, ತಂಡದ ತರಬೇತುದಾರರಾದ ಆರೀಫ್ ತಲಪಾಡಿ, ಶೌಕತ್ ಅಲಿ ರಾಮಲ್ ಕಟ್ಟೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.