Thursday, October 26, 2023

ಶಂಕಿತ ಡೆಂಗ್ಯೂ ಯುವ ಉದ್ಯಮಿ ಮೃತ್ಯು

Must read

 

ಬಂಟ್ವಾಳ, ಸೆ. ೧೩: ಶಂಕಿತ ಡೆಂಗ್ ಜ್ವರಕ್ಕೆ ಬಾಧಿತರಾಗಿ ಬಂಟ್ವಾಳ ತಾಲೂಕಿನ ಕೆದಿಲ ಸತ್ತಿಕಲ್ಲು ನಿವಾಸಿ, ಯುವ ಉದ್ಯಮಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೂಲತಃ ಪುತ್ತೂರು ತಾಲೂಕಿನ ದೇಲಂಪಾಡಿಯವರಾದ, ಸದ್ಯ ಬಂಟ್ವಾಳ ತಾಲೂಕಿನ ಪೆರಮೊಗರು ನಿವಾಸಿ ಪ್ರಶಾಂತ ಸರಳಾಯ(೪೦) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಪ್ರಾರಂಭದಲ್ಲಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಬಗ್ಗೆ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಬಂದಿಲ್ಲ.

More articles

Latest article