ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಫಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಕಲ್ಲಡ್ಕ ಇದರ ಸಹಭಾಗಿತ್ವದಲ್ಲಿ ಬೋಳಂತಿಮೊಗೇರು ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸ್ವಾಸ್ತ್ಯಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜನಜಾಗ್ರತಿ ವೇದಿಕೆಯ ತಾಲೂಕು ಅಧ್ಯಕ್ಷ ಬಾಲಕೃಷ್ಣ ಆಳ್ವ ಕೋಡಾಜೆ ಯವರು ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ವಲಯದ ನಿಕಟಪೂರ್ವ ಅಧ್ಯಕ್ಷ ಬಟ್ಯಪ್ಪ ಶೆಟ್ಟಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆ ಯನ್ನು ವಿಜ್ಞಾನ ಅಧ್ಯಾಪಕರಾದ ಸತೀಶ್ ರವರು ವಹಿಸಿದ್ದರು. ವೇದಿಕೆಯಲ್ಲಿ ಜನಜಾಗೃತಿ ವಲಯಧ್ಯಕ್ಷೆ ಜಯಂತಿ ಪೂಜಾರಿ , ಪ್ರಗತಿಬಂದು ಒಕ್ಕೂಟದ ವಲಯಧ್ಯಕ್ಷ ಈಶ್ವರ ನಾಯ್ಕ್ , ಮಾಮೇಶ್ವರ ಒಕ್ಕೂಟದ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಯಶೋಧ ಸಹಕರಿಸಿದರು. ಅಧ್ಯಾಪಕರಾದ ಪ್ರವೀಣ್ ರವರು ಸ್ವಾಗತಿಸಿ , ಸತೀಶ್ ರವರು ವಂದಿಸಿದರು. ವಲಯ ಮೇಲ್ವಿಚಾರಕಿ ಪ್ರೇಮ ಕಾರ್ಯಕ್ರಮ ನಿರೂಪಿಸಿದರು.