ಯಕ್ಷಗಾನ ಸಮಿತಿ ಮಾಣಿ ಇದರ ಆಶ್ರಯದಲ್ಲಿ 36ನೇ ವರ್ಷದ ಯಕ್ಷಗಾನ ತಾಳಮದ್ದಲೆ ಕೂಟ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಯಕ್ಷಗಾನ ಪೋಷಕರಾಗಿದ್ದು ಇತ್ತೀಚೆಗೆ ನಿಧನರಾದ ಮಾಣಿ-ಪಲ್ಕೆ ರಾಮಚಂದ್ರ ಆಚಾರ್ಯ ಇವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಮಾಣಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಮಿತಿ
ಯ ಮಾಜಿ ಅಧ್ಯಕ್ಷ ಕೊಂಬಿಲ ನಾರಾಯಣ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಅಧ್ಯಕ್ಷ ಮೋಹನ್ ಪೈ ಮಾಣಿ ನುಡಿನಮನ ಸಲ್ಲಿಸಿದರು. ಮಂಗಳೂರು ಭಾರತ್ ಬೀಡೀಸ್ ಇದರ ಆಂತರಿಕ ಲೆಕ್ಕ ಪರಿಶೋಧಕ ಶಿವಾನಂದ ಪೈ, ಕಾರ್ಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಕಾರ್ಯದರ್ಶಿ ಬಾಲಕೃಷ್ಣ ಆಳ್ವ, ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಲೆ ‘ಸುಧನ್ವಾರ್ಜುನ’ ಯಶಸ್ವಿಯಾಗಿ ನಡೆಯಿತು.