ಬಂಟ್ವಾಳ: ಅವಾಹಿತ ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಬರಿಮಾರು ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ಲಿಂಗಪ್ಪ ಪೂಜಾರಿ ಅವರ ಪುತ್ರಿ ತುಳಸಿ ಎಂದು ಗುರುತಿಸಲಾಗಿದೆ. ತುಳಸಿ ಅವರು ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆ ತಂದೆಯ ಜೊತೆ ಮಲಗಿದ್ದವಳು ನಾಪತ್ತೆಯಾಗಿದ್ದಳು.
ಮಂಗಳವಾರ ಬೆಳಿಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿಬಳಿಯಲ್ಲಿ ನೇತ್ರಾವತಿ ನದಿಯಲ್ಲಿ ತುಳಸಿಯ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಬೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.