Wednesday, April 10, 2024

ಬಂಟ್ವಾಳ ತಾಲೂಕು ಮಟ್ಟದ ಜಿನಭಜನಾ ಸ್ಪರ್ಧೆ

ಕಲ್ಲಡ್ಕ : ಜೈನ್ ಮಿಲನ್ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಜಿನ ಭಜನಾ ಸ್ಪರ್ಧೆ, ಪರ್ಬದ ಪುದ್ದರ್, ಭವ್ಯ ಸ್ಮರಣಾಂಜಲಿ, ದೀಪಾವಳಿ ಆಚರಣೆ ಹಾಗೂ ನೂತನ ಯುವ ಜೈನ್ ಮಿಲನ್ ಪದಾಧಿಕಾರಿಗಳ ಪದಗ್ರಹಣ ಅ.27ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಿಲನ್ ಬಂಟ್ವಾಳ ಅಧ್ಯಕ್ಷ ಡಾ| ಸುದೀಪ್ ಕುಮಾರ್ ಸಿದ್ದಕಟ್ಟೆ ಅಧ್ಯಕ್ಷತೆಯಲ್ಲಿ ನಡೆಯಿತು.
ಮಿಲನ್ ಮಂಗಳೂರು ವಿಭಾಗ ಅಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ ಭಜನೆ ಭಗವತ್ ಭಕ್ತರನ್ನು ಒಂದಾಗಿಸುತ್ತದೆ. ಇಂದು ಭಾಗವಹಿಸಿದ ಎಲ್ಲ ತಂಡಗಳು ಮುಂದಕ್ಕೆ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಲು ಪೂರ್ವ ತಯಾರಿ ನಡೆಸಬೇಕು. ಮಹಿಳೆಯರು ಕೂಡಾ ಇದರಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಉಡುಪಿ ಜೈನ್ ಮಿಲನ್ ಅಧ್ಯಕ್ಷ ಸುಽರ್ ಕುಮಾರ್ ವೈ ಮಾತನಾಡಿ ಸಲ್ಲೇಖನ ಪೂರ್ವಕ ಸಮಾಧಿ ಹೊಂದಿದ ದಿವ್ಯಾತ್ಮರಾದ ಪರಮಪೂಜ್ಯ ರಾಷ್ಟ್ರ ಸಂತ ಶ್ವೇತ ಪಿಂಛಾಚಾರ್‍ಯ 108 ವಿದ್ಯಾನಂದ ಮುನಿ ಮಹಾರಾಜರು ಮತ್ತು ರಾಷ್ಟ್ರ ಸಂತ ಜಂಗಲ್ ವಾಲೆ ಬಾಬ ಖ್ಯಾತಿಯ ಪರಮ ಪೂಜ್ಯ 108 ಚಿನ್ನಯ ಸಾಗರ ಮುನಿ ಮಹಾರಾಜರಿಗೆ ಭಾವಪೂರ್ಣ ವಿನಯಾಂಜಲಿ ಸಲ್ಲಿಸಿದರು.
ಮಂಗಳೂರು ವಿಭಾಗದ ವಲಯ ನಿರ್ದೇಶಕ ಧನ್ಯ ಕುಮಾರ್ ರೈ ಬಂಟ್ವಾಳ ಯುವ ಜೈನ್ ಮಿಲನ್ 2019-20ರ ಸಾಲಿನ ಅಧ್ಯಕ್ಷ ಸುಮನ್ ಜೈನ್ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮುಂದೆ ನಡೆದುಕೊಳ್ಳಬೇಕಾದ ಕ್ರಮ ಸಾಧನೆಗಳ ಬಗ್ಗೆ ವಿವರ ನೀಡಿದರು.
ಇದೇ ಸಂದರ್ಭ ಬಂಟ್ವಾಳ ಶ್ರೀ ಅದಿನಾಥ ತೀರ್ಥಂಕರ ಜಿನ ಚೈತ್ಯಾಲಯದಲ್ಲಿ 48 ವರ್ಷಗಳ ಪರ್ಯಂತ ಪುರೋಹಿತರಾಗಿ ಸೇವೆ ಸಲ್ಲಿಸಿದ ಅನಂತರಾಜ ಇಂದ್ರ ಅವರನ್ನು ಸಮ್ಮಾನಿಸಲಾಯಿತು.
ಜಿ.ಪಂ. ಮಾಜಿ ಸದಸ್ಯೆ ರಾಜಶ್ರೀ ಎಸ್. ಹೆಗ್ಡೆ, ಸುಧಿರ್ ಕುಮಾರ್ ವೈ, ಪ್ರ.ಕಾರ್ಯದರ್ಶಿ ಸುಭಾಶ್‌ಚಂದ್ರ ಜೈನ್, ಕಾರ್ಯದರ್ಶಿ ಜಯಕೀರ್ತಿ ಉಪಸ್ಥಿತರಿದ್ದರು.
ಭಜನಾ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ 22 ಮಂದಿ, ಹಿರಿಯರ ವಿಭಾಗದ 21 ಮಂದಿ ಭಾಗವಹಿಸಿದರು. ತೀರ್ಪುಗಾರರಾಗಿ ಭಗವಾನ್ ದಾಸ್, ಜಿತೇಂದ್ರ ಜೈನ್ ಬೆಂಗಳೂರು, ಚಂದನಾ ಬೃಜೇಶ್ ಬಾಳ್ತಿಲ ಸಹಕರಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮೀಕ್ಷಾ ಪ್ರಾರ್ಥನೆ ನೆರವೇರಿಸಿದರು. ಸನ್ಮತಿ ಜಯಕೀರ್ತಿ ಸ್ವಾಗತಿಸಿ, ಯುವ ಜೈನ್ ಮಿಲನ್ ಕಾರ್ಯದರ್ಶಿ ಸಮೀಕ್ಷಾ ಜೈನ್ ವಂದಿಸಿದರು. ಆದಿರಾಜ ಜೈನ್ ಕೊಯಕ್ಕುಡೆ ಮತ್ತು ಉದಯ ಕುಮಾರ್ ಮದ್ವ ಕಾರ್ಯಕ್ರಮ ನಿರ್ವಹಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...