Tuesday, October 31, 2023

ಗ್ಯಾಸ್ ಸೋರಿಕೆ: ಸ್ಥಳದಲ್ಲಿ ಆತಂಕ

Must read

ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ ಏಕಾಏಕಿ ತೆರದ ಪರಿಣಾಮ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು. ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳ ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.

More articles

Latest article