Friday, October 20, 2023

ಮಾಣಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ

Must read

ಬಂಟ್ವಾಳ:  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ 2017-18 ಸಾಲಿನ ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಸುಮಾರು 14 ಲಕ್ಷ ಅನುದಾನದಿಂದ ಅನುಷ್ಠಾನಗೊಂಡ ಮಾಣಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ಅವರ ನೇತೃತ್ವದಲ್ಲಿ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಮಾಣಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಮ್.ಎಸ್ ಮಹಮ್ಮದ್, ಎ.ಪಿ.ಎಮ್.ಸಿ ಅಧ್ಯಕ್ಷರಾದ ಪದ್ಮನಾಭ ರೈ, ಮಾಣಿ ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳ ಕುಶಲ, ಮಾಣಿ ಗ್ರಾಮ ಪಂಚಾಯತ್ ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್, ಶ್ರೀಧರ್ ರೈ. ಕುಶಲ.ಎಮ್, ವಿಕೆಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

More articles

Latest article