ವಿಟ್ಲ : ಇಂದು ಮಂಗಳವಾರ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 11.30 ಕ್ಕೆ ದೇವರ ಪಲ್ಲಕ್ಕಿ ಸವಾರಿ ಜಠಾಧಾರಿ ಕಟ್ಟೆಗೆ ಹೋಗಿ ಮಧ್ಯಾಹ್ನ ವನಭೋಜನ ನಡೆಯಲಿದೆ. ರಾತ್ರಿ 7 ಗಂಟೆಯಿಂದ ಕಾರ್ತಿಕ ದೀಪೋತ್ಸವ, ಉತ್ಸವ ಬಲಿ, ಚಂದ್ರಮಂಡಲೋತ್ಸವ, ಕಟ್ಟೆ ಪೂಜೆ, ಶ್ರೀ ಪಂಚಲೊಂಗೇಶ್ವರ ಸನ್ನಿಧಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.