Wednesday, April 10, 2024

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕಲ್ಲಡ್ಕ: ನ.6 ರಂದು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ , ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಹಿರಿಯ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ 7ನೇ ತರಗತಿಯ ಶ್ರೀನಿವಾಸ, ಕೆ.ಕೆ ಧನುಷ್ ಕೆ.ಜಿ ಮಾಸ್ಟರ್, ದೀಕ್ಷಿತ್. ಧನುಷ್ ಹಾಗೂ 6ನೇ ತರಗತಿಯ ಭೂಷಣ್, ಭಾರ್ಗವರಾಮ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಕಿರಿಯ ವಿಭಾಗದ ರಸಪ್ರಶ್ನೆಯಲ್ಲಿ 4ನೇ ತರಗತಿಯ ಪವನ್ ನಾಯಕ್, ಅಂಕಿತಾ, ಶ್ರೀವತ್ಸ, ಆಕಾಶ್, ಬ್ರಾಹ್ಮಿ, ಹಾಗೂ ಈಶಾನ್ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಿರಿಯ ವಿಭಾಗದಲ್ಲಿ ತಮಿಳು ಕಂಠಪಾಠ ಸ್ಪರ್ಧೆಯಲ್ಲಿ ೩ನೇ ತರಗತಿಯ ರಮ್ಯ ತೃತೀಯ ಸ್ಥಾನ, ಹಾಗೂ ಹಿರಿಯ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ೬ನೇ ತರಗತಿಯ ವಾಸವಿ ಕೆ.ಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...