ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರ, ದುರ್ಗಾನಗರ , ಕುರಿಯಾಳ ಇದರ ನೂತನ ಭಜನಾ ಮಂದಿರದ ನಿಧಿ ಕುಂಭ ಸಹಿತ ಶಿಲಾನ್ಯಾಸ ಸಮಾರಂಭ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮನ.14 ರಂದು ಗುರುವಾರ ಬೆಳಿಗ್ಗೆ 9.10 ರ ಸುಮೂರ್ತದಲ್ಲಿ ನಡೆಯಿತು.
ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿದರು.
ಮೋನಪ್ಪ ಆಚಾರ್ಯ ರಾಯಿ ಹಾಗೂ ವೇ. ಮೂ. ಶ್ರೀ ಸುದರ್ಶನ್ ಬಳ್ಲಾಲ್ ಇವರು ವೈದಿಕ ಕ್ರಿಯೆ ನೆರವೇರಿಸಿದರು.
ಸಮಾರೋಪ ಸಮಾರಂಭದಲ್ಲಿ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷ ಕೆ ಸೇಸಪ್ಪ ಕೋಟ್ಯಾನ್, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ಅಮ್ಟಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ ಮತ್ತು ಹಲವು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು .
ಜಗದೀಶ್ ಬಂಗೇರ ಹೊಸಮಣ್ಣು ಸ್ವಾಗತಿಸಿ
ಹರೀಶ್ ಶೆಟ್ಟಿ ಪಡು ಪ್ರಸ್ತಾಪಿಸಿ, ದಿನೇಶ್ ಸುವರ್ಣ ರಾಯಿ ನಿರೂಪಿಸಿ ವಂದಿಸಿದರು