Friday, April 5, 2024

ಸರಪಾಡಿಯಲ್ಲಿ ಎಸ್‌ವಿಎಸ್ ಕಾಲೇಜಿನ ಎನ್‌ಎಸ್‌ಎಸ್‌ನ ವಾರ್ಷಿಕ ವಿಶೇಷ ಶಿಬಿರ

ಬಿ.ಸಿ.ರೋಡ್ : ಜೀವನದಲ್ಲಿ ಸೋಲು ಎದುರಾದರೆ ಕುಗ್ಗದೆ ಮುಂದುವರಿದು ಗೆಲ್ಲುವ ಪ್ರಯತ್ನ ಮಾಡಬೇಕು. ಎನ್.ಎಸ್.ಎಸ್. ಎನ್ನುವುದು ನಮಗೆ ಬದುಕಿನ ಪಾಠಗಳನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಅದನ್ನು ತಮ್ಮ ಜೀವನದಲ್ಲಿ ಅಳವಡಿಸುವುದರ ಮೂಲಕವಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದಾಗಿ ಸಮಾಜಕ್ಕೆ ತುಂಬಾ ಪ್ರಯೋಜನವಾಗುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹೇಳಿದರು.
ಅವರು ಸರಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಸ್.ವಿ.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಎನ್.ಎಸ್.ಎಸ್ ವಿದ್ಯಾರ್ಥಿಯೊಬ್ಬನ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ. ಬದುಕಿನಲ್ಲಿ ಎಲ್ಲವನ್ನೂ ಎದುರಿಸುವ ಮನೋಸ್ಥೈರ್ಯವನ್ನು ನೀಡುತ್ತದೆ ಎಂದರು.
ಸಮಾರಂಭವನ್ನು ತಾಲೂಕು ಪಂಚಾಂiiತ್ ಸದಸ್ಯೆ ಸ್ವಪ್ನಾ ವಿಶ್ವನಾಥ ಉದ್ಘಾಟಿಸಿದರು. ಶಿಬಿರಾಧಿಕಾರಿ ಡಾ. ಮಂಜುನಾಥ ಉಡುಪ ಕೆ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಶ್ರೀಧರ ಪೂಜಾರಿ, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ, ಗೌರವಾಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ, ಪುರುಷೋತ್ತಮ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು, ನಾಣ್ಯಪ್ಪ ಪೂಜಾರಿ, ಸರಪಾಡಿ ಹಿ.ಪ್ರಾ. ಶಾಲೆ ಎಸ್‌ಡಿಎಂಸಿ ಅದ್ಯಕ್ಷ ಗೋಪಾಲ ಪೂಜಾರಿ, ದಂತ ವೈದ್ಯ ಬಾಲಚಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮಾ ಆಗಮಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಹರ್ಷಿತ್, ಧನುಷ್,  ಗೌತಮಿ,  ದೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಶಶಿಕಲಾ ಯಂ.ಪಿ. ಧನ್ಯವಾದ ನೀಡಿದರು. ಸಹಶಿಬಿರಾಧಿಕಾರಿಗಳಾದ ಉಪನ್ಯಾಸಕರಾದ ಕಿಟ್ಟು ರಾಮಕುಂಜ, ಕಾರ್ತಿಕ್, ಸುಪ್ರಿಯಾ ಬೆಂಡೆ,  ಸುಪ್ರಿಯಾ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...