Saturday, April 6, 2024

ಲೋರೆಟ್ಟೋ ಚರ್ಚ್ ಪರಮ ಪ್ರಸಾದ ಮೆರವಣಿಗೆ

ಬಂಟ್ವಾಳ: ಲೋರೆಟ್ಟೊ ಮಾತಾ ಚರ್ಚ್ ನ ವಾರ್ಷಿಕ ಹಬ್ಬದ ಪ್ರಯುಕ್ತ ಆದಿತ್ಯವಾರ ದಂದು ಪರಮ ಪ್ರಸಾದ ದ ಮೆರವಣಿಗೆ ಬಹಳ ಭಕ್ತಿಪೂರ್ವಕವಾಗಿ, ಶ್ರದ್ಧೆಯಿಂದ, ಅದ್ದೂರಿಯಾಗಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯದ  ಜೆಪ್ಪು ಸಂತ ಜೋಸಫ್ ಸೆಮಿನರಿಯ  ರೆಕ್ಟರ್ ರಾಗಿರುವ ವಂ. ಆಂಟನಿ ಪಿಂಟೊ ರವರು ಪ್ರಧಾನ ಧರ್ಮಗುರುಗಳಾಗಿ ನೂರಾರು ಭಕ್ತಾದಿಗಳೊಂದಿಗೆ ಬಲಿಪೂಜೆ ಯನ್ನು ಅರ್ಪಿಸಿದರು. ಚರ್ಚ್ ನ ಧರ್ಮಗುರುಗಳಾದ ವಂ. ಎಲಿಯಸ್ ಡಿಸೋಜಾ, ವಂ. ಅನಿಲ್ ಫೆರ್ನಾಂಡಿಸ್,  ಬಲಿಪುಜೆಯಲ್ಲಿ ಪಾಲ್ಗೊಂಡರು. ಅಲಂಕರಿತ ಜೇಪೀನಲ್ಲಿ ಚರ್ಚ್ ನಿಂದ ಆರಂಭಗೊಂಡ  ಪರಮ ಪ್ರಸಾದದ ಮೆರವಣಿಗೆ ಬ್ಯಾಂಡ್ ವಾದ್ಯ, ಪಟಾಕಿಗಳ ಸಡಗರದೊಂದಿಗೆ ಲೋರೆಟ್ಟೊ ಅಂಚೆ ಕಛೇರಿಯಿಂದ ಲೋರೆಟ್ಟೊ ಪದವ್ ಮೂಲಕ ಚರ್ಚ್ ಗೆ ಬಂದು ಕೊನೆಗೊಂಡಿತು.
ಇದೇ ಸಂದರ್ಭದಲ್ಲಿ ಚರ್ಚ್ ವ್ಯಾಪ್ತಿಯ ಎಲ್ಲಾ ಕ್ರೈಸ್ತ  ಕುಟುಂಬಗಳಿಗೆ ಗೌರವ ಪೂರ್ವಕವಾಗಿ ಮೇಣದ ಬತ್ತಿ ಯನ್ನು ವಿತರಿಸಲಾಯಿತು.  ಬಲಿಪುಜೆಯಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ ಪಪ್ಸ್ ಹಾಗೂ ತಂಪು ಪಾನೀಯವನ್ನು ವಿತರಿಸಲಾಯಿತು. ಈ ಕಾರ್ಯಕ್ರಮ ವನ್ನುಚರ್ಚ್ ಪಾಲನಾ ಮಂಡಳಿ  ಭಕ್ತಿ, ಶಿಸ್ತು ಬದ್ಧವಾಗಿ  ಆಯೋಜಿಸಿತ್ತು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...