Wednesday, April 17, 2024

ಮಾಣಿ: ಕುಲಾಲ ಸಂಘದ ವಾರ್ಷಿಕ ಕ್ರೀಡಾ ಕೂಟ

ಬಂಟ್ವಾಳ: ಕುಲಾಲ ಸಂಘ (ರಿ.)ಮಾಣಿ ಇದರ ವಾರ್ಷಿಕ ಕ್ರೀಡಾ ಕೂಟ ಡಿ.8. ರಂದು ಆದಿತ್ಯ ವಾರ ಮಾಣಿ ಗಾಂಧಿ ಮೈದಾನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಬೋಜನಾರಾಯಣ ಕ್ರೀಡಾ ಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು
ಸಮಾಜ ಬಾಂಧವರು ಕ್ರೀಡೆಯ ಮೂಲಕ ಒಟ್ಟಾಗಿ ಪರಸ್ಪರ ಸಂಬಂಧ ವನ್ನು ಗಟ್ಟಿ ಗೊಳಿಸಲು ಸಹಕಾರಿಯಾಗುತ್ತದೆ, ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇವೆ.
ಸಂಘಟನೆ ಬಲಪಡಿಸಲು ಇಂತಹ ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ನಿರಂತರ ಸಂಘದ ಶ್ರೇಯೋಭಿವೃದ್ದಿಗೆ ಶ್ರಮಿಸಲು ಎಲ್ಲರ ಸಹಕಾರ ಅಗತ್ಯ ವಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಪದ್ಮನಾಭ ಕೊಮ್ಮಕೋಡಿ, ಉಪಾಧ್ಯಕ್ಷ ಮೋಹನ್ ಕುಲಾಲ್ ಕಜೆ, ಕೋಶಾಧಿಕಾರಿ ಸದಾಶಿವ ಮಾಣಿ, ಕ್ರೀಡಾ ಕಾರ್ಯದರ್ಶಿ ಹರೀಶ್ ಕುಲಾಲ್ ಕರಿಮಜಲು,ಜತೆ ಕಾರ್ಯದರ್ಶಿ ಪ್ರಸಾದ್ ಕುಲಾಲ್ ಮಾಣಿ, ವಸಂತ್ ಕುಲಾಲ್ ಶಂಬುಗ, ಮಾಜಿ ಅಧ್ಯಕ್ಷ ರಾಮಚಂದ್ರ ಮಾಸ್ತರ್, ಕಾರ್ಯದರ್ಶಿ ನಾರಾಯಣ ಕುಲಾಲ್ , ಪ್ರಮುಖರಾದ ಸುದೇಶ್ ಕುಲಾಲ್ ಶಂಬುಗ, ಜನಾರ್ಧನ ಕುಲಾಲ್, ಮಾದವ ಕುಲಾಲ್ ಪೆರಾಜೆ, ಗುರುವಪ್ಪ ಕುಲಾಲ್ ಕೆದಿಲ, ಮಹಿಳಾ ಘಟಕದ ಅಧ್ಯಕ್ಷೆ ರಾಜೀವಿಚೆನ್ನಪ್ಪ ಮಾಣಿ, ಗೌರವಾಧ್ಯಕ್ಷೆ ಸುಶೀಲ ಆನಂದ ಮಾಣಿ, ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕುಲಾಲ್ ಮಾಣಿ, ಕಾರ್ಯ ದರ್ಶಿ ವಿಶ್ವಾಸ ಕುಲಾಲ್ ಮಾಣಿ, ಮತ್ತಿತರರು ಉಪಸ್ಥಿತರಿದ್ದರು.
ಪುರುಷ ರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಹೀಗೆ ಮೂರು ವಿಭಾಗದಲ್ಲಿ ವಿವಿಧ ಕ್ರೀಡೆ ಗಳನ್ನು ಆಯೋಜಿಸಲಾಗಿದ್ದು, ಮಾಣಿ ಕುಲಾಲ ಸಂಘದ ವ್ಯಾಪ್ತಿಯ ಕುಲಾಲ ಸಮುದಾಯದವರು ಭಾಗವಹಿಸಿದ್ದರು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...