Monday, October 30, 2023

ಪಂಜಿಕಲ್ಲು : ಬ್ಯಾನರ್‌ ಅನ್ನು ಹಾನಿಗೊಳಿಸಿದ ಕಿಡಿಗೇಡಿಗಳು

Must read

ಬಂಟ್ವಾಳ : ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಅಣ್ಣಳಿಕೆ-ಕರಿಮಲೆ ಗ್ರಾಮಸ್ಥರು ಅಣ್ಣಳಿಕೆ ದ್ವಾರದ ಬಳಿ ಹಾಕಲಾಗಿದ್ದ ಬ್ಯಾನರ್‌ ಅನ್ನು ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಅಭಿವೃದ್ಧಿ ಯೋಜನೆಯಲ್ಲಿ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಅಣ್ಣಳಿಕೆ -ಕರಿಮಲೆ ರಸ್ತೆ ಹಾಗೂ ತಡೆಗೋಡೆ 2 ಕೋಟಿ ರೂ. ಅನುದಾನ ಮಂಜೂರು ಮಾಡಿಸಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಅಣ್ಣಳಿಕೆ ಗ್ರಾಮಸ್ಥರು ಅಣ್ಣಳಿಕೆ ದ್ವಾರದ ಬಳಿ ಬುಧವಾರ ಬ್ಯಾನರ್‌ವೊಂದನ್ನು ಅಳವಡಿಸಿದ್ದರು. ಅದನ್ನು ಕಿಡಿಗೇಡಿಗಳು ಸಂಪೂರ್ಣ ಹರಿದು ಭಗ್ನಗೊಳಿಸಿದ್ದಾರೆ.

More articles

Latest article