ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಆಲದಪದವು ಶ್ರೀ ಹರಿ ಎಜುಕೇಶನ್ ಟ್ರಸ್ಟ್ನ ಅಕ್ಷರ ಭಾರತಿ ವಿದ್ಯಾಲಯ ಇದರ 2019-20ನೇ ಸಾಲಿನ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಮೋಹನ್ ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಬಿ.ಪದ್ಮಶೇಖರ್ ಜೈನ್, ಪೋಷಕ ಸಂಘದ ಅಧ್ಯಕ್ಷ ಅರುಣ್ ಐತಾಳ್, ಶ್ರೀ ಹರಿ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಭಾರತಿ ಎಸ್.ರೈ, ಶಾಲಾ ಮುಖ್ಯೋಪಾಧ್ಯಾಯ ಮೋಹನ್ ಎಚ್., ಶಾಲಾ ನಾಯಕಿ ಕ್ಷಿತಿ, ಸಮಿತಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು . ಬಳಿಕ ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಚಾಲಕ ಮೋಹನ್ ರೈ ಕೆ. ಸ್ವಾಗತಿಸಿ, ಶಿಕ್ಷಕ ಸುಕೇಶ್ ಕೆ. ವಂದಿಸಿರು.ಶಿಕ್ಷಕಿ ಮೆಲೀನಾ ಕಾರ್ಯಕ್ರಮ ನಿರೂಪಿಸಿದರು.