Tuesday, October 24, 2023

ಬೆಂಗಳೂರು ರಸ್ತೆ ಅಪಘಾತ: ಹೊಸಂಗಡಿಯ ಮೂವರ ಸಾವು, ಆರು ಜನರಿಗೆ ಗಂಭೀರ ಗಾಯ

Must read

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗುಡೇಮಾರನಹಳ್ಳಿ ಬಳಿ‌ ಭೀಕರ ಅಪಘಾತ ಸಂಭವಿಸಿದೆ. ತಿರುಪತಿಗೆ ತೆರಳಿ ದೇವರ ದರ್ಶನ‌ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇವರು ಮಂಜೇಶ್ವರ ಹೊಸಂಗಡಿ ಬೆಜ್ಜ ನಿವಾಸಿ ದುರ್ಗಾ ಬಸ್ಸು ಚಾಲಕ ಕಿಶನ್ ಬೆಜ್ಜ, ಮಂಜೇಶ್ವರ ಚರ್ಚ್ ಬಳಿ ನಿವಾಸಿ ಅಕ್ಷಯ್, ಅಂಗಡಿಪದವು ನಿವಾಸಿ ಮೋನಪ್ಪ ಮೇಸ್ತ್ರಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೇಲ್ಸತುವೆಯ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕುದೂರು ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

More articles

Latest article