Thursday, October 26, 2023

ಬಿ.ಸಿ.ರೋಡು: ಮದುವೆ ಮಂಟಪಕ್ಕೂ ಬಂತು ‘ಪೌರತ್ವ’ ಭಿತ್ತಿಚಿತ್ರ…!

Must read

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಗೀತಾಂಜಲಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಬಡಗಬೆಳ್ಳೂರು ಸಮೀಪದ ಕಮ್ಮಾಜೆ ಯುವಕರು ‘ಪೌರತ್ವ ತಿದ್ದುಪಡಿ ಕಾಯ್ದೆ’ ಬೆಂಬಲಿಸಿ ಭಿತ್ತಿಚಿತ್ರ ಪ್ರದಶರ್ಿಸಿ ಗಮನ ಸೆಳೆದಿದ್ದಾರೆ.
ತಾಲೂಕಿನ ತೆಂಗಬೆಳ್ಳೂರು ಗ್ರಾಮದ ಹೆಬ್ಬರಬೈಲು ನಿವಾಸಿ ರೋಹಿತ್ ಗಾಣಿಗ ಮತ್ತು ಕಡೇಶಿವಾಲಯ ನಿವಾಸಿ ಶೋಭಾ ಇವರ ವಿವಾಹ ಕಾರ್ಯಕ್ರಮ ಶುಕ್ರವಾರ ನಡೆದಿದ್ದು, ಇಲ್ಲಿಗೆ ಬಂದಿದ್ದ ಅಪಾರ ಮಂದಿ ಸಂಬಂಧಿಕರು ಮತ್ತು ಸ್ನೇಹಿತರು ನೂತನ ವಧು-ವರರಿಗೆ ಶುಭ ಹಾರೈಸಿದರು. ಇದೇ ವೇಳೆ ಬಡಗಬೆಳ್ಳೂರು ಸಮೀಪದ ಕಮ್ಮಾಜೆ ನಾಗಶ್ರೀ ಮಿತ್ರ ವೃಂದ ಸಂಘಟನೆ ಯುವಕರು ವಿವಾಹ ಮಂಟಪದಲ್ಲಿ ಬಂದು ‘ಪೌರತ್ವ ತಿದ್ದುಪಡಿ ಕಾಯ್ದೆ’ ಬೆಂಬಲಿಸಿ ಭಿತ್ತಿಚಿತ್ರ ಪ್ರದಶರ್ಿಸಿ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದಿದ್ದಾರೆ.

More articles

Latest article