Thursday, April 18, 2024

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂವರು ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.26ರಂದು ಮಂಗಳೂರಿನಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನ. 1ರಂದು ನೀಡಬೇಕಿದ್ದರೂ, ಕಳೆದ ನವೆಂಬರ್‌ನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಪ್ರಶಸ್ತಿ ವಿತರಣೆಯಾಗಿರಲಿಲ್ಲ.
ಪ್ರಸ್ತುತ ಬಂಟ್ವಾಳ ಕ್ಷೇತ್ರದ ಹಿರಿಯ ನಾಟಕ ಕಲಾವಿದ ಎಚ್ಕೆ ನಾಯನಾಡು, ಕೋಳಿ ನೃತ್ಯ ಖ್ಯಾತಿಯ ಅಶೋಕ್ ಪೊಳಲಿ ಹಾಗೂ ನಾಗಸ್ವರ ವಾದಕ ಪ್ರಶಾಂತ್ ಜೋಗಿ ಅವರು ಆಯ್ಕೆಯಾಗಿದ್ದಾರೆ.

ಎಚ್ಕೆ ನಾಯನಾಡು
ರಂಗನಿರ್ದೇಶಕ, ಸಾಹಿತಿ, ಉದ್ಘೋಷಕ ಎಚ್ಕೆ ನಯನಾಡು ಅವರು ತಾಲೂಕಿನ ಮಣಿಹಳ್ಳ ಪಣೆಕಲಪಡ್ಪುನಲ್ಲಿ ನೆಲೆಸಿದ್ದಾರೆ. ನಾಟಕ ರಚನೆಗಾರರಾಗಿ, ನಟರಾಗಿ,ನಿರ್ದೇಶಕರಾಗಿ, ಕವಿಯಾಗಿ, ಸಂಘಟಕರಾಗಿ, ಸಾಹಿತಿಯಾಗಿ, ಚಲನಚಿತ್ರ ಕಲಾವಿದರಾಗಿ, ಸಂಘಟಕರಾಗಿ, ಸಾಮಾಜಿಕ/ ಸಾಹಿತ್ಯ/ ಕಲೆ/ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ಅಶೋಕ್ ಪೊಳಲಿ
ಕೋಳಿ ನೃತ್ಯದ ಮೂಲಕ ಹೆಸರು ಮಾಡಿರುವ ಅಶೋಕ್ ಪೊಳಲಿಯವರು ಕರಿಯಂಗಳ ಗ್ರಾಮದ ಪಡ್ಪು ಮನೆ ನಿವಾಸಿಯಾಗಿದ್ದಾರೆ. ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡುವ ಮೂಲಕ ಖ್ಯಾತಿ ಗಳಿಸಿದ್ದು, ಹಲವಾರು ಪ್ರತಿಷ್ಠಿತ ಟಿವೆ ಚಾನೆಲ್‌ಗಳಲ್ಲೂ ತನ್ನ ಕಲಾ ಪ್ರದರ್ಶನದ ಮೂಲಕ ಮೆಚ್ಚುಗೆ ಗಳಿಸಿದ್ದರು.

ಪ್ರಶಾಂತ್ ಜೋಗಿ ಮಿತ್ತಕೆರೆ
ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳ ನಾಗಸ್ವರ ವಾದಕರಾಗಿರುವ ಪ್ರಶಾಂತ್ ಜೋಗಿ ಮಿತ್ತಕೆರೆ ಅವರು ಸಜೀಪಮೂಡ ಗ್ರಾಮದ ಮಿತ್ತಕೆರೆ ನಿವಾಸಿಯಾಗಿದ್ದಾರೆ. ಸುಮಾರು 25 ದೇವಸ್ಥಾನಗಳು, 30 ದೈವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಖ್ಯಾತಿ ಪಡೆದಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...