ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಗಣಪತಿ ಹವನದ ಬಳಿಕ ಕೊಪ್ಪರಿಗೆ ಮುಹೂರ್ತ ನಡೆಯಿತು.
ಜುಮಾದಿ ಸಾನ್ನಿಧ್ಯದಲ್ಲಿ ಕಲಾಶಾಭಿಷೇಕ, ಗರಡಿಯಲ್ಲಿ ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ ನಡೆಯಿತು.
ಜ.28 ರಂದು ಕ್ಷೇತ್ರದಲ್ಲಿ ಅಷ್ಟೋತ್ತರ ಶತ(108) ನಾರಿಕೇಳ ಗಣಪತಿ ಹವನ, ಶತ ಚಂಡಿಕಾ ಯಾಗದ ಪಾರಾಯಣ ಆರಂಭವಾಗಲಿದೆ. ಬೈದೇರಿಗಳ ಗರಡಿಯಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ, ದುರ್ಗಾಹೋಮ ಇನ್ನಿತರವೈದಿಕ, ಧಾರ್ಮಿಕ ಪೂಜಾ ಕಾರ್ಯಗಳು ನಡೆಯಲಿವೆ. ರಾತ್ರಿ ಧಾರ್ಮಿಕ ಸಭೆ ನಡೆಯಲಿದ್ದು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನಾನಾ ಕ್ಷೇತ್ರಗಳ ಗಣ್ಯ ಮಹನೀಯರು ಭಾಗವಹಿಸಲಿದ್ದಾರೆ.