ನಿಟ್ಟಡೆ: ಭಾರತೀಯ ವಿದ್ಯಾರ್ಥಿ ಸಂಘ ಕರ್ನಾಟಕ ಇದರ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು, ಇದರಲ್ಲಿ ಪದವಿ, ಪಿಯುಸಿ ಹಾಗೂ ಪ್ರೌಢಶಾಲಾ ಎಂಬ 3 ವಿಭಾಗಗಳನ್ನು ಏರ್ಪಡಿಸಿದ್ದಾರೆ. ಅದರಂತೆ ಪ್ರೌಢಶಾಲಾ ವಿಭಾಗದ ‘ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯಲ್ಲಿ ವೇಣೂರು ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ/ಕಾಲೇಜಿನ 10ನೇ ತರಗತಿಯ ವಿದ್ಯಾರ್ಥಿನಿ ಮಾನಸ ಅವರು ಸುಮಾರು 35,000 ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಪಡೆದಿದ್ದಾರೆ. ಪ್ರಥಮ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕಾ ಪಾಲಕರಾಗಿ ಬಂದಂತಹ ನಡ ಸ.ಪ.ಪೂ. ಕಾಲೇಜಿನ ಇತಿಹಾಸ ಉಪನ್ಯಾಸಕ ಗಂಗಾಧರ್ ಹಾಗೂ ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು.