Sunday, April 7, 2024

ಟ್ರಾಫಿಕ್ ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ವಿಡಿಯೋ ವೈರಲ್ : ಇಬ್ಬರು ಪೋಲೀಸ್ ವಶಕ್ಕೆ

ಬಂಟ್ವಾಳ: ಟ್ರಾಪಿಕ್ ಪೋಲೀಸರ ಕರ್ತವ್ಯ ಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟ್ರಾಫಿಕ್ ಪೋಲೀಸರು ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ರಸ್ತೆ ಬದಿಯಲ್ಲಿ ವಾಹನಗಳ ತಪಾಸಣೆ ನಡೆಸಿ ರಸ್ತೆ ನಿಯಮಗಳನ್ನು ಪಾಲಿಸದ ಮತ್ತು ಟ್ರಾಫಿಕ್ ರೂಲ್ ಗಳನ್ನು ಪಾಲಿಸದ ವಾಹನ ಸವಾರರಿಗೆ ಕೇಸು ದಾಖಲಿಸುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಟ್ರಾಫಿಕ್ ಎಸ್.ಐ.ಸಹಿತ ಪೋಲೀಸ್ ಸಿಬ್ಬಂದಿ ಗಳಿಗೆ ಕರ್ತವ್ಯ ಕ್ಕೆ ಅಡ್ಡಿಪಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿತ್ತು.
ಈ ಆಧಾರದ ಲ್ಲಿ ಬಂಟ್ವಾಳ ನಗರ ಪೋಲಿಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಟ್ರಾಫಿಕ್ ಪೋಲೀಸರಿಗೆ ಕಾನೂನಿನ ಪಾಠ ಹೇಳುವಂತಹ ವಿಡಿಯೋ ಜೊತೆಗೆ ಇಲ್ಲಿಂದ ತೆರಳಿ ಎಂದು ಹೇಳುವ ವಿಡಿಯೋ ವೈರಲ್ ಅಗಿದೆ, ಜೊತೆಗೆ ಕಾನೂನು ಪಾಲಿಸದ ಈ ಸವಾರರಿಗೆ ನೀಡಿದ ನೋಟೀಸ್ ಅನ್ನು ಹರಿದುಬಿಸಾಡುತ್ತೇನೆ ಎಂದು ಕೂಡಾ ವಿಡಿಯೋ ದಲ್ಲಿ ಹೇಳಲಾಗಿದೆ.
ಪೋಲೀಸ್ ಸಿಬ್ಬಂದಿ ಅವರು ಏಕವಚನದಲ್ಲಿ ಸವಾರರನ್ನು ಕರೆದಿದ್ದಾರೆ ಎಂದು ಹೇಳಿದ ಬಳಿಕ ನೀವು ಹಣ ಲೂಟಿ ಮಾಡುತ್ತಿದ್ದೀರಿ, ನೀವು ಇಲ್ಲಿಂದ ತೆರಳಿ, ನಿಮಗೆ ಅಧಿಕಾರ ನೀಡಿದವರು ಯಾರು ಎಂದು ಅವರು ಪೋಲೀಸರಿಗೆ ಪ್ರಶ್ನೆ ಮಾಡುವ ವಿಡಿಯೋ ವೈರಲ್ ಅಗಿದೆ.

ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಪೋಲೀಸರ ಕರ್ತವ್ಯ ಕ್ಕೆ ಅಡ್ಡಿಪಡಿಸುವ ಪಡಿಸುವ ಅನೇಕ ಘಟನೆಗಳು ನಡೆಯುತ್ತಿದೆ.
ಇಂತಹ ಪ್ರಕರಣಗಳ ಬಗ್ಗೆ ಸೂಕ್ತವಾದ ಕಾನೂನು ಕ್ರಮಗಳನ್ನು ಪೋಲೀಸ್ ಇಲಾಖೆ ಕೈಗೊಳ್ಳದಿದ್ದರೆ, ಟ್ರಾಫಿಕ್ ಪೋಲೀಸರ ಕರ್ತವ್ಯ ಕ್ಕೆ ಇನ್ನಷ್ಟು ತೊಂದರೆ ಅಗಲಿದೆ ಹಾಗಾಗಿ ಪೋಲೀಸರಿಗೆ ನೈತಿಕ ಬೆಂಬಲ ನೀಡಲು ಅಂತವರ ಮೇಲೆ ಕ್ರಮ ಕೈಗೊಳ್ಳಲು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಗಳು ಹರಿದಾಡುತ್ತಿದೆ

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...