Sunday, October 22, 2023

ಪ್ರಸನ್ನ ಕುಮಾರ್ ಪಕ್ಕಳ ಅವರಿಗೆ ಬೀಳ್ಕೊಡುಗೆ ಸಮಾರಂಭ

Must read

ಬಂಟ್ವಾಳ: ಬಂಟ್ವಾಳದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಕುಮಾರ್ ಪಕ್ಕಳ ಅವರನ್ನು ಮಂಗಳೂರು
ತಾಲೂಕಿಗೆ ವರ್ಗಾವಣೆಗೊಳಿಸಲಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಬೀಳ್ಕೊಡುಗೆ ಮಾಡಲಾಯಿತು.
ಬಂಟ್ವಾಳ ಮಿನಿ ವಿಧಾನ ಸೌಧದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್. ಆರ್ ಪ್ರಸನ್ನ ಕುಮಾರ್ ಪಕ್ಕಳ ಅವರ ಜನಸ್ನೇಹಿ ಗುಣ, ನಗುಮುಖದ ಸೇವೆ ಹಾಗೂ ಜನರಿಗೆ ಸೇವೆ ಮಾಡಬೇಕೆನ್ನುವ ಮನೋಬಾವ ಮಾದರಿಯಾಗಿದ್ದು,  ಅವರ ಕರ್ತವ್ಯ ದಕ್ಷತೆಗೆ ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದರು.
ಬಳಿಕ ತಾಲೂಕು ಕಚೇರಿ ಸಿಬ್ಬಂದಿಯವರ ಪರವಾಗಿ
ಮಾತನಾಡಿದ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಪ್ರಸನ್ನ ಕುಮಾರ್ ಅವರ ಬಗ್ಗೆ ಮೆಚ್ಚುಗೆ ಮಾತನಾಡಿ ಶುಭ ಹಾರೈಸಿದರು.

ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ
ಶುಭ ಹಾರೈಸಿದರು.
ಬಳಿಕ ಪಕ್ಕಳ ಅವರಿಗೆ ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

More articles

Latest article