ಮಡಂತ್ಯಾರು: ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ರವರು ಮಡಂತ್ಯಾರು, ಬಸವನಗುಡಿ, ಪುಂಜಾಲಕಟ್ಟೆ , ನೇರಳಕಟ್ಟೆ ವಾಮದಪದವು ಸೇರಿದಂತೆ ಇತರ ಸ್ಥಳಗಳಲ್ಲಿ ದಿನಸಿ ಅಂಗಡಿಗಳಲ್ಲಿ ದಿನನಿತ್ಯ ಉಪಯೋಗ ವಸ್ತುಗಳ ಖರೀದಿಯಲ್ಲಿ ತೊಡಗಿದ್ದ ಜನತೆಗೆ, “ಕೋರೊನ” ದ ಬಗ್ಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿದರು. ಕೊರೋನ ವೈರಸ್ ಹರಡದಂತೆ ತಡೆಗಟ್ಟುವಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮವನ್ನು ಸರಿಯಾಗಿ ಪಾಲಿಸುವಂತೆ ಹಾಗೂ ಅನಗತ್ಯ ವಿಚಾರಗಳಿಗೆ ಯಾರು ಕೂಡ ಮನೆಯ ಹೊರಬಾರದಂತೆ ವಿನಂತಿಸಿದರು. ಜನರು ಅಗತ್ಯ ವಸ್ತುಗಳ ಖರೀದಿಗಾಗಿ ಮಧ್ಯಾಹ್ನ 12ಗಂಟೆಯೊಳಗೆ ಮುಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿ ಸೂಚನೆ ನೀಡಿದ್ದಾರೆ.
ಮಧ್ಯಾಹ್ನ 12 ಗಂಟೆಯ ನಂತರ ಯಾರು ಕೂಡ ತುರ್ತು ಕಾರ್ಯಗಳ ಸಂದರ್ಭದಲ್ಲಿ ಹೊರತುಪಡಿಸಿ, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವುದು ಕಂಡು ಬಂದರೆ ಅಂಥವರ ಚಾಲಕನ ಪರವಾನಿಗೆ ಹಾಗೂ ವಾಹನ ಪರವಾನಿಗೆಯನ್ನು ರದ್ದುಗೊಳಿಸುತ್ತೆನೆ ಎಂದು ಹೇಳಿ IPC ಸೆಕ್ಷನ್ ಪ್ರಕಾರ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತೆವೆ ಎಂದು ಧ್ವನಿವರ್ಧಕದ ಮೂಲಕ ಹೇಳಿ, ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಕೇಳಿಕೊಂಡರು.