ಬಂಟ್ವಾಳ : ಇಲ್ಲಿನ ಕೈಕಂಬ ದಿನಸಿ ಅಂಗಡಿಯೊಂದರಲ್ಲಿ ಇಲಾಖೆಯ ಅದೇಶ ದಿಕ್ಕರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ಗುಂಪು ಗುಂಪಾಗಿ ಸಾಮಾಗ್ರಿಗಳನ್ನು ಖರೀದಿಸಲು ಮುಂದಾದ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾಹಿತಿ ಪಡೆದ ತಾಲೂಕಿನ ಆಡಳಿತ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಕಿದ ಗೆರೆಯೊಳಗೆ ನಿಲ್ಲಿಸಿದರು.