Thursday, October 26, 2023

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಉತ್ತಮ ಸೌಲಭ್ಯದಲ್ಲಿ ಪಡಿತರ ವಿತರಣೆ

Must read

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಕಳ್ಳಿಗೆ ಶಾಖೆಯ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ಉತ್ತಮ ಸೌಲಭ್ಯದೊಂದಿಗೆ ಪಡಿತರ ವಿತರಿಸಲಾಗುತ್ತಿದೆ. ಜನರ ಅನುಕೂಲಕ್ಕಾಗಿ ಶಾಮೀಯಾನದ ವ್ಯವಸ್ಥೆಯೊಂದಿಗೆ ಕುಳಿತುಕೊಳ್ಳಲು ಸಾಮಾಜಿಕ ಅಂತರದೊಂದಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ಸಂಸ್ಥೆಯ ವತಿಯಿಂದ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಲಾಗುತ್ತಿದೆ. ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ, ನಿರ್ದೇಶಕರಾದ ಪದ್ಮನಾಭ ರಾವ್ ಕನಪಾಡಿ, ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾ ಉಪಧ್ಯಕ್ಷರಾದ ಪುರುಷ ಎನ್ ಸಾಲಿಯಾನ್ ಮತ್ತು ಪಂಚಾಯತ್ ಸದಸ್ಯರು ಸಂಘದ ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿ, ಪಂಚಾಯತ್ ಅಭಿವೃಧ್ದಿ ಅಧಿಕಾರಿ ಎಲ್ಲರೂ ಸೇರಿ ಯಾವುದೇ ಗೊಂದಲವಿಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮೇಲ್ವಿಚಾರಣೆ ಮಾಡಿ ಎರಡು ತಿಂಗಳ ಪಡಿತರ ವಿತರಣೆ ಸುಸೂತ್ರವಾಗಿ ನಡೆಯುತ್ತಿದೆ.

More articles

Latest article