Friday, April 19, 2024

ಬಿಜೆಪಿ ಸಂಸ್ಥಾಪನಾ ದಿನ; ಕಾರ್ಯಕರ್ತರಿಗೆ ಐದು ಅಂಶಗಳ ಸಂದೇಶ ನೀಡಿದ ಪ್ರಧಾನಿ ಮೋದಿ

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ. ಬಿಜೆಪಿ ಕಾರ್ಯಕರ್ತರಿಗೆ ಐದು ಅಂಶಗಳ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ.

1. ಸಂಸ್ಥಾಪನಾ ದಿನವಾದ ಇಂದು ಬಿಜೆಪಿಯ ಕಾರ್ಯಕರ್ತರು ಒಂದು ಹೊತ್ತಿನ ಊಟ ಬಿಡಬೇಕು. ಈ ಮೂಲಕ ಲಾಕ್​ಡೌನ್​ ಸಂದರ್ಭದಲ್ಲಿ ಹಸಿವಿನಿಂದ ಬಳಲುತ್ತಿರುವ ನಿರ್ಗತಿಕರ ಜತೆ ನಾವಿದ್ದೇವೆ ಎಂಬ ಒಗ್ಗಟ್ಟಿನ ಸಂದೇಶ ಸಾರಬೇಕು. ಹಾಗೇ ಬಿಜೆಪಿ ಕಾರ್ಯಕರ್ತರು ಬಡ ಜನರಿಗೆ ಪಡಿತರ ತಲುಪಿಸುವ ಅವಿರತ ಕೆಲಸ ಮಾಡಬೇಕಿದೆ.
2. ಬಡ ಜನರಿಗೆ ಹಾಗೂ ಅಗತ್ಯವಿರುವವರಿಗೆ ಮಾಸ್ಕ್ ವಿತರಿಸುವುದು.
3. ಕೊರೊನಾ ವಿರುದ್ದ ಅವಿರತ ಹೋರಾಡುತ್ತಿರುವ ವೈದ್ಯರು, ನರ್ಸ್​​​ಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಪೊಲೀಸರು, ಅಗತ್ಯ ಸರಕು ಸೇವೆ ಒದಗಿಸುತ್ತಿರುವರಿಗೆ ಕೃತಜ್ಞತೆ ಸಲ್ಲಿಸುವುದು.
4. ಕೊರೊನಾ ಬಗ್ಗೆ ಸಮಗ್ರ ಮಾಹಿತಿ ನೀಡುವ ಆರೋಗ್ಯ ಸೇತು ಮೊಬೈಲ್ ಆಪ್ ಇನ್ಸ್ಟಾಲ್ ಮಾಡಿಕೊಳ್ಳಬೇಕು ಮತ್ತು ಸುತ್ತಲಿನ ಜನರ ಮೊಬೈಲ್​ಗೂ ಮಾಡಿಸಬೇಕು.
5. ಕೊರೊನಾ ವಿರುದ್ದ ಹೋರಾಡಲು ಪ್ರಧಾನಿ ಕೇರ್ ಫಂಡ್ ಗೆ ದೇಣಿಗೆ ನೀಡಲು ಜನರಿಗೆ ಮಾಹಿತಿ ತಲುಪಿಸಲು ಸಲಹೆ. ಓರ್ವ ಕಾರ್ಯಕರ್ತ ಕನಿಷ್ಠ 40 ಜನರನ್ನು ಪ್ರೇರೇಪಿಸಬೇಕು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...