ಬಂಟ್ವಾಳ: ಕೈಕಂಬ ದಲ್ಲಿ ಬೀದಿಬದಿಯಲ್ಲಿ ತರಕಾರಿ ಸಂತೆ ಒರ್ವ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಹೆಚ್.ಗೌಡ.
ಕೈಕಂಬ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಚಮ್ಮಿ ಬಂಧಿತ ಆರೋಪಿ.
ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ವೇಳೆಯಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಮಾರಾಟ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿದೆ..ಅದರೆ ಇದೇ ಅವಕಾಶವನ್ನು ದುರುಪಯೋಗ ಪಡಿಸಿಕೊಂಡು ಬಳಿಕ ಪೋಲೀಸರ ಅತಿಥಿಗಳಾಗುತ್ತಿದ್ದಾರೆ
ಬಿಸಿರೋಡಿನ ಕೈಕಂಬ ದಲ್ಲಿ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಚಮ್ಮಿ ಎಂಬಾತ ಪೋಲೀಸರ ಮಾತು ಕೇಳದೆ ವ್ಯಾಪಾರ ಕ್ಕೆ ಮುಂದಾಗಿದ್ದ.
ರಾಜ್ಯದಲ್ಲಿ ಯಾವುದೇ ಸಂತೆಗಳು ಮತ್ತು ಬೀದಿ ಬದಿಯಲ್ಲಿ ವ್ಯಾಪಾರ ವಹಿವಾಟು ಮಾಡಬಾರದು ಎಂಬ ಅದೇಶ ವಿದ್ದರು ಕೈಕಂಬ ಪ್ರದೇಶದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೀದಿ ಬದಿಯಲ್ಲಿ ತರಕಾರಿ ರಾಶಿ ಹಾಕಿ ಮಾರಾಟ ಮಾಡುತ್ತಿದ್ದ.
ಈತನ ಈ ನಿರ್ಲಕ್ಷ್ಯ ತನದ ವ್ಯಾಪಾರದಿಂದ ಸೊಂಕು ಹರಡುವ ಲಕ್ಷಣಗಳು ಇರುವುದರಿಂದ ಈತನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.