Sunday, April 7, 2024

ಕೊರೋನಾ ಸೋಂಕು ಪತ್ತೆಗೆ ಹೊಸ ಆಪ್- ಆರೋಗ್ಯ ಸೇತು

ಬಂಟ್ವಾಳ: ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಭಾರತ ಸರ್ಕಾರ ಹೊಸ ಆಪ್ ಒಂದನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಬಿಡುಗಡೆ ಮಾಡಿರುವ ದೃಡೀಕೃತ ಕೊರೊನಾ ವೈರಸ್ ಪೊಸಿಟಿವ್ ಪ್ರಕರಣಗಳ ಮಾಹಿತಿ ಪಡೆಯಲು ಆರೋಗ್ಯ ಸೇತು ಕೊವಿಡ್-19 ಕಾರ್ಯನಿರ್ವಹಿಸುತ್ತಿದೆ. ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಯ ಮೇಲೆ ನಿಗಾ ಇರಿಸುವ ಮತ್ತು ವೈಯಕ್ತಿಕ ಅಲರ್ಟ್ ಸಂದೇಶದ ಮೂಲಕ ಎಚ್ಚರಿಕೆ ನೀಡುವ ವಿಶೇಷತೆಯುಳ್ಳ ಆರೋಗ್ಯ ಸೇತು ಕೊವಿಡ್-19 ಟ್ರ್ಯಾಕರ್ ಮೊಬೈಲ್ ಆಪ್ ಅಳವಡಿಸಿಕೊಂಡರೆ ನಿಮ್ಮ ಬಳಿ ಕೊರೋನಾ ಪೊಸಿಟಿವ್ ದೃಢಪಟ್ಟಿರುವ ವ್ಯಕ್ತಿ ಬಂದರೆ, ಅಥವಾ ನಿಮ್ಮ ಸಮೀಪ ಇದ್ದರೆ ಕೂಡಲೇ ಆಪ್ ಅಲರ್ಟ್ ಆಗುವ ಮೂಲಕ ಎಚ್ಚರಿಸುತ್ತದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ಅಪ್ ಉಪಯುಕ್ತವಾಗಿದೆ.


ಈ ಅಪ್ ಅನ್ನು ನೀವು ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ಪ್ಲೇ ಸ್ಟೋರ್ ನಲ್ಲಿ ಲಭ್ಯ. ಬ್ಲೂಟೂತ್ ಹಾಗೂ ಲೊಕೇಶನ್ ಆನ್ ಮಾಡಿರಬೇಕು.
ಈ ಆಪ್ ಅನ್ನು ಸಾರ್ವಜನಿಕರು, ಸರಕಾರಿ ನೌಕರರು, ಸ್ವಯಂ ಸೇವಕರು ಕಡ್ಡಾಯವಾಗಿ ಬಳಸಿ, ಎಚ್ಚರಿಕೆಯಿಂದರಬಹುದು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...