ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ತಾಲೂಕಿನ ಕಡೇಶ್ವಾಲ್ಯ, ವೀರಕಂಭ, ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಕೊರೊನಾ ವೈರಸ್ ಮುಂಜಾಗ್ರತಾ ಹಿನ್ನೆಲೆಯ ಟಾಸ್ಕ್ಪೋರ್ಸ್ ಸಮಿತಿಗಳ ಪರಿಶೀಲನಾ ಸಭೆ ನಡೆಸಿದರು.
ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದಿರುವವರ 28 ದಿನಗಳ ಹೋಮ್ ಕ್ವಾರಂಟೈನ್ ಪರಿಸ್ಥಿತಿಯ ಕುರಿತು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕೇಂದ್ರಗಳ ಸಹಾಯಕರಿಂದ ಮಾಹಿತಿ ಪಡೆದರು. ಜತೆಗೆ ಗ್ರಾಮದಲ್ಲಿರುವ ಇತರ ರೋಗಿಗಳು, ಡಯಾಲಿಸೀಸ್ ನಡೆಸುವವರ ಕುರಿತು ಮಾಹಿತಿ ಕೇಳಿದರು.
ಗ್ರಾಮಗಳಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿ ವಿತರಣೆಯ ಸ್ಥಿತಿಗತಿಗಳ ಕುರಿತು ಆಯಾಯ ನ್ಯಾಯಬೆಲೆ ಅಂಗಡಿಯವರಿಂದ ಮಾಹಿತಿ ಪಡೆಯಲಾಯಿತು. ಹೊರ ಜಿಲ್ಲೆಯ ಕಾರ್ಮಿಕರಿಗೆ ಪಡಿತರ ವಿತರಣೆಯ ಕುರಿತು ಶಾಸಕರ ಗಮನಕ್ಕೆ ತರಲಾಯಿತು.
ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ಮಂಜುಳಾ ಮಾಧವ ಮಾವೆ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಗೀತಾ ಚಂದ್ರಶೇಖರ್, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶಾಸಕರ ಆಪ್ತ ಸಹಾಯಕ ದಿನೇಶ್, ನೆಟ್ಲಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ವಿಜಯ, ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಸನತ್ ಕುಮಾರ್ ರೈ, ಕಡೇಶ್ವಾಲ್ಯ ಗ್ರಾ.ಪಂ.ಅಧ್ಯಕ್ಷೆ ಶ್ಯಾಮಲಾ ಶೆಟ್ಟಿ, ವೀರಕಂಭ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಗ್ರಾ.ಪಂ.ಗಳ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಬೀಟ್ ಪೊಲೀಸರು ಮೊದಲಾದವರು ಭಾಗವಹಿಸಿದ್ದರು.